April 2, 2025
ಚಿತ್ರ ವರದಿಜಿಲ್ಲಾ ಸುದ್ದಿ

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

ಬೆಳ್ತಂಗಡಿ : ಹಲವಾರು ಜನಪ್ರೀಯ ಕಾರ್ಯಕ್ರಮಗಳ ಮೂಲಕ‌ ಜನಮನ ಗೆದ್ದ ಕರಾವಳಿಯ ಹೆಸರಾಂತ ಚಾನೆಲ್ ನಮ್ಮ‌ ಟಿವಿ ಪ್ರಸ್ತುತ ಪಡೆಸಿದ ಬಲೆ ಚಾತುರ್ಪು ತೋಜಾಲೆ ರೀಯಾಲಿಟಿ ಶೋ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕವು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡು ನಗದು ರೂ 2 ಲಕ್ಷ ಮತ್ತು ಪ್ರಶಸ್ತಿಯನ್ನು ಪಡೆದುಕೊಂಡಿದೆ.


20 ನಿಮಿಷದಲ್ಲಿ ಸಾಂಸ್ಕ್ರತಿಕ ವೈವಿಧ್ಯಮಯ ಕಾರ್ಯಕ್ರಮವನ್ನು ನೀಡ ಬೇಕಿದ್ದ ಈ ಸ್ಪರ್ಧೆಯಲ್ಲಿ ಉಡುಪಿ, ದಕ್ಷಿಣ ಕನ್ನಡದ 20 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ಅಂತಿಮವಾಗಿ ನೇತ್ರಾವತಿ ನದಿ ತಿರುವು ಯೋಜನೆಯ ಬಗ್ಗೆ ಪ್ರಸ್ತುತ ಪಡಿಸಿದ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ‌ ಸ್ಥಾನ ಒದಗಿ ಬಂದಿದೆ.
ದಿಗ್ಗಜ ಸಂಗೀತ ನಿರ್ದೆಶಕರಾದ ಗುರುಕಿರಣ್, ರಂಗ ಕಮಿ ಜಗನ್ ಪವರ್, ನಟ ಸೂರಜ್ ಸನಿಲ್ ತೀರ್ಪುಗಾರರಾಗಿ ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಂಡವು ಅತ್ಯುತ್ತಮ‌ ಪ್ರದರ್ಶನವನ್ನು ನೀಡಿ ಜಯಶಾಲಿಯಾಗಿದೆ.
ಕಲಾ‌ ಸಾಧಕರಾದ ಅನೀಶ್ ಅಮಿನ್ ವೇಣೂರು, ಸ್ಪಿತೇಶ್ ಎಸ್ ಬಾರ್ಯ ನಿರ್ದೇಶನದೊಂದಿಗೆ ಚಂದ್ರಹಾಸ ಬಳಂಜರವರ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬಂದಿರುತ್ತದೆ.

ತಾಲೂಕಿನ ಸುಮಾರು 60 ಜನ ಕಲಾವಿದರಾಗಿ ಭಾಗವಹಿಸಿದ್ದು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ , ಕೋಶಾಧಿಕಾರಿ ವಿಜಯ್ ಶಿರ್ಲಾಲು ಹಾಗೂ ಸರ್ವ ಸದಸ್ಯರು ಮತ್ತು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ‌ ಅಧ್ಯಕ್ಷರಾದ ರಾಜೇಶ್ ಜೊತೆಗಿದ್ದು ಸಂಪೂರ್ಣ ಸಹಕಾರ ನೀಡಿದರು.

Related posts

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!