23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿಜಿಲ್ಲಾ ಸುದ್ದಿ

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

ಬೆಳ್ತಂಗಡಿ : ಹಲವಾರು ಜನಪ್ರೀಯ ಕಾರ್ಯಕ್ರಮಗಳ ಮೂಲಕ‌ ಜನಮನ ಗೆದ್ದ ಕರಾವಳಿಯ ಹೆಸರಾಂತ ಚಾನೆಲ್ ನಮ್ಮ‌ ಟಿವಿ ಪ್ರಸ್ತುತ ಪಡೆಸಿದ ಬಲೆ ಚಾತುರ್ಪು ತೋಜಾಲೆ ರೀಯಾಲಿಟಿ ಶೋ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕವು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡು ನಗದು ರೂ 2 ಲಕ್ಷ ಮತ್ತು ಪ್ರಶಸ್ತಿಯನ್ನು ಪಡೆದುಕೊಂಡಿದೆ.


20 ನಿಮಿಷದಲ್ಲಿ ಸಾಂಸ್ಕ್ರತಿಕ ವೈವಿಧ್ಯಮಯ ಕಾರ್ಯಕ್ರಮವನ್ನು ನೀಡ ಬೇಕಿದ್ದ ಈ ಸ್ಪರ್ಧೆಯಲ್ಲಿ ಉಡುಪಿ, ದಕ್ಷಿಣ ಕನ್ನಡದ 20 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ಅಂತಿಮವಾಗಿ ನೇತ್ರಾವತಿ ನದಿ ತಿರುವು ಯೋಜನೆಯ ಬಗ್ಗೆ ಪ್ರಸ್ತುತ ಪಡಿಸಿದ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ‌ ಸ್ಥಾನ ಒದಗಿ ಬಂದಿದೆ.
ದಿಗ್ಗಜ ಸಂಗೀತ ನಿರ್ದೆಶಕರಾದ ಗುರುಕಿರಣ್, ರಂಗ ಕಮಿ ಜಗನ್ ಪವರ್, ನಟ ಸೂರಜ್ ಸನಿಲ್ ತೀರ್ಪುಗಾರರಾಗಿ ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಂಡವು ಅತ್ಯುತ್ತಮ‌ ಪ್ರದರ್ಶನವನ್ನು ನೀಡಿ ಜಯಶಾಲಿಯಾಗಿದೆ.
ಕಲಾ‌ ಸಾಧಕರಾದ ಅನೀಶ್ ಅಮಿನ್ ವೇಣೂರು, ಸ್ಪಿತೇಶ್ ಎಸ್ ಬಾರ್ಯ ನಿರ್ದೇಶನದೊಂದಿಗೆ ಚಂದ್ರಹಾಸ ಬಳಂಜರವರ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬಂದಿರುತ್ತದೆ.

ತಾಲೂಕಿನ ಸುಮಾರು 60 ಜನ ಕಲಾವಿದರಾಗಿ ಭಾಗವಹಿಸಿದ್ದು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ , ಕೋಶಾಧಿಕಾರಿ ವಿಜಯ್ ಶಿರ್ಲಾಲು ಹಾಗೂ ಸರ್ವ ಸದಸ್ಯರು ಮತ್ತು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ‌ ಅಧ್ಯಕ್ಷರಾದ ರಾಜೇಶ್ ಜೊತೆಗಿದ್ದು ಸಂಪೂರ್ಣ ಸಹಕಾರ ನೀಡಿದರು.

Related posts

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಬಾಜೆ: ಕಟ್ಟಿಗೆ ತರಲೆಂದು ಹೋದವರು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya
error: Content is protected !!