22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿಜಿಲ್ಲಾ ಸುದ್ದಿ

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

ಬೆಳ್ತಂಗಡಿ : ಹಲವಾರು ಜನಪ್ರೀಯ ಕಾರ್ಯಕ್ರಮಗಳ ಮೂಲಕ‌ ಜನಮನ ಗೆದ್ದ ಕರಾವಳಿಯ ಹೆಸರಾಂತ ಚಾನೆಲ್ ನಮ್ಮ‌ ಟಿವಿ ಪ್ರಸ್ತುತ ಪಡೆಸಿದ ಬಲೆ ಚಾತುರ್ಪು ತೋಜಾಲೆ ರೀಯಾಲಿಟಿ ಶೋ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕವು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡು ನಗದು ರೂ 2 ಲಕ್ಷ ಮತ್ತು ಪ್ರಶಸ್ತಿಯನ್ನು ಪಡೆದುಕೊಂಡಿದೆ.


20 ನಿಮಿಷದಲ್ಲಿ ಸಾಂಸ್ಕ್ರತಿಕ ವೈವಿಧ್ಯಮಯ ಕಾರ್ಯಕ್ರಮವನ್ನು ನೀಡ ಬೇಕಿದ್ದ ಈ ಸ್ಪರ್ಧೆಯಲ್ಲಿ ಉಡುಪಿ, ದಕ್ಷಿಣ ಕನ್ನಡದ 20 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ಅಂತಿಮವಾಗಿ ನೇತ್ರಾವತಿ ನದಿ ತಿರುವು ಯೋಜನೆಯ ಬಗ್ಗೆ ಪ್ರಸ್ತುತ ಪಡಿಸಿದ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ‌ ಸ್ಥಾನ ಒದಗಿ ಬಂದಿದೆ.
ದಿಗ್ಗಜ ಸಂಗೀತ ನಿರ್ದೆಶಕರಾದ ಗುರುಕಿರಣ್, ರಂಗ ಕಮಿ ಜಗನ್ ಪವರ್, ನಟ ಸೂರಜ್ ಸನಿಲ್ ತೀರ್ಪುಗಾರರಾಗಿ ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಂಡವು ಅತ್ಯುತ್ತಮ‌ ಪ್ರದರ್ಶನವನ್ನು ನೀಡಿ ಜಯಶಾಲಿಯಾಗಿದೆ.
ಕಲಾ‌ ಸಾಧಕರಾದ ಅನೀಶ್ ಅಮಿನ್ ವೇಣೂರು, ಸ್ಪಿತೇಶ್ ಎಸ್ ಬಾರ್ಯ ನಿರ್ದೇಶನದೊಂದಿಗೆ ಚಂದ್ರಹಾಸ ಬಳಂಜರವರ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬಂದಿರುತ್ತದೆ.

ತಾಲೂಕಿನ ಸುಮಾರು 60 ಜನ ಕಲಾವಿದರಾಗಿ ಭಾಗವಹಿಸಿದ್ದು ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅಶ್ವಥ್ ಕುಮಾರ್, ಕಾರ್ಯದರ್ಶಿ ಸುನಿಲ್ ಕನ್ಯಾಡಿ , ಕೋಶಾಧಿಕಾರಿ ವಿಜಯ್ ಶಿರ್ಲಾಲು ಹಾಗೂ ಸರ್ವ ಸದಸ್ಯರು ಮತ್ತು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ‌ ಅಧ್ಯಕ್ಷರಾದ ರಾಜೇಶ್ ಜೊತೆಗಿದ್ದು ಸಂಪೂರ್ಣ ಸಹಕಾರ ನೀಡಿದರು.

Related posts

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!