23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya
error: Content is protected !!