July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

ಉಜಿರೆ: ತಾಲೂಕಿನ ವಿವಿಧ ಬಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಕೇರಳ ಸಾಂಪ್ರದಾಯಿಕ ವಿಷು ಕಣಿ ಉತ್ಸವ ಎ. 9ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೋಕ್ತೇಶರ ಶರತ್ ಕೃಷ್ಣ ಪಡ್ವೆಟ್ನಾಯ ತೆಂಗಿನ ಗರಿ ಒಡೆಯುವ ಮೂಲಕ ಉದ್ಘಾಟಿಸಿ ಶುಭ ಕೋರಿದರು.

ವಿಷು ಕಣಿಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭ ಕೋರಿದರು.

ಬೆಳ್ತಂಗಡಿ ತಾಲೂಕು ವಿಷು ಕಣಿ ಆಚರಣ ಸಮಿತಿಯಿಂದ ವಿಷು ಕಣಿ 2.0 ಕಾರ್ಯಕ್ರಮ ಆಯೋಜಿಸಿದ್ದು ಪ್ರತಿಷ್ಠಿತ ಕಲಾವಿದರಿಂದ ಹಾಗೂ ಸಿನೆಮಾ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.

ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ಇಡುವುದನ್ನು ವಿಷು ಕಣಿ ಎಂದು ಕರೆಯುತ್ತಿದ್ದು ಹೆಚ್ಚಾಗಿ ಕೃಷಿ ಕುಟುಂಬಗಳಲ್ಲಿ ಈ ಆಚರಣೆ ತೊಡಗಿಕೊಂಡಿದೆ.

ಕಾರ್ಯಕ್ರಮದಲ್ಲಿ ಕೇರಳ ಸಂಪ್ರದಾಯದಂತೆ ವಿವಿಧ ತಿಂಡಿ ತಿನಸುಗಳು,ಪೂಕಲಂ,ವಿವಿಧ ಆಟೋಟ ಸ್ಪರ್ದೆಗಳು,ಕೇರಳ ಚೆಂಡೆ,ಗೊಂಬೆಗಳು ಎಲ್ಲರ ಗಮನ ಸಳೆಯಿತು.

ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್, ಸಮಿತಿ ಪ್ರಮುಖರಾದ ಅನಿಲ್ ಕುಮಾರ್,ಪ್ರಸಾದ್ ಬಿಎಸ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya
error: Content is protected !!