30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

ಉಜಿರೆ: ತಾಲೂಕಿನ ವಿವಿಧ ಬಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಕೇರಳ ಸಾಂಪ್ರದಾಯಿಕ ವಿಷು ಕಣಿ ಉತ್ಸವ ಎ. 9ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶೀಯ ಆಡಳಿತ ಮೋಕ್ತೇಶರ ಶರತ್ ಕೃಷ್ಣ ಪಡ್ವೆಟ್ನಾಯ ತೆಂಗಿನ ಗರಿ ಒಡೆಯುವ ಮೂಲಕ ಉದ್ಘಾಟಿಸಿ ಶುಭ ಕೋರಿದರು.

ವಿಷು ಕಣಿಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭ ಕೋರಿದರು.

ಬೆಳ್ತಂಗಡಿ ತಾಲೂಕು ವಿಷು ಕಣಿ ಆಚರಣ ಸಮಿತಿಯಿಂದ ವಿಷು ಕಣಿ 2.0 ಕಾರ್ಯಕ್ರಮ ಆಯೋಜಿಸಿದ್ದು ಪ್ರತಿಷ್ಠಿತ ಕಲಾವಿದರಿಂದ ಹಾಗೂ ಸಿನೆಮಾ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.

ಪ್ರತಿ ಕುಟುಂಬಗಳೂ ತಮ್ಮಲ್ಲಿ ಬೆಳೆದಂತಹ ದವಸ- ಧಾನ್ಯಗಳನ್ನು, ತರಕಾರಿ ಬೆಳೆಗಳನ್ನು ದೇವರಿಗೆ ಕಾಣಿಕೆ ಇಡುವಂತಹ ಸಂಪ್ರದಾಯ ಎಲ್ಲ ಕಡೆಗಳಲ್ಲೂ ನಾವು ಕಾಣುತ್ತೇವೆ. ಈ ರೀತಿಯ ಕಾಣಿಕೆ ಇಡುವುದನ್ನು ವಿಷು ಕಣಿ ಎಂದು ಕರೆಯುತ್ತಿದ್ದು ಹೆಚ್ಚಾಗಿ ಕೃಷಿ ಕುಟುಂಬಗಳಲ್ಲಿ ಈ ಆಚರಣೆ ತೊಡಗಿಕೊಂಡಿದೆ.

ಕಾರ್ಯಕ್ರಮದಲ್ಲಿ ಕೇರಳ ಸಂಪ್ರದಾಯದಂತೆ ವಿವಿಧ ತಿಂಡಿ ತಿನಸುಗಳು,ಪೂಕಲಂ,ವಿವಿಧ ಆಟೋಟ ಸ್ಪರ್ದೆಗಳು,ಕೇರಳ ಚೆಂಡೆ,ಗೊಂಬೆಗಳು ಎಲ್ಲರ ಗಮನ ಸಳೆಯಿತು.

ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸಾದ್, ಸಮಿತಿ ಪ್ರಮುಖರಾದ ಅನಿಲ್ ಕುಮಾರ್,ಪ್ರಸಾದ್ ಬಿಎಸ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya
error: Content is protected !!