25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಹಣ್ಣು ಹಂಪಲು ಕೃಷಿಕರಾದ ಅನಿಲ್ ಬಳಂಜರವರ ಕೃಷಿತೋಟದ ಸಂದರ್ಶನ ಆಯೋಜನೆಗೊಂಡಿತು.

ಆಸ್ಟ್ರೇಲಿಯಾ, ಸಿಂಗಾಪುರ, ಬ್ರೆಜಿಲ್, ಥಾಯ್ಲ್ಯಾಂಡ್, ಮಲೇಶಿಯಾ, ಅಮೇರಿಕಾ, ಆಫ್ರಿಕಾ, ಶ್ರೀಲಂಕಾ ಮೊದಲಾದ ವಿದೇಶೀ ತಳಿಗಳ ಜೊತೆಗೆ ಸ್ವದೇಶೀ ತಳಿಗಳೂ ಸರಿ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹಣ್ಣು ಹಂಪಲುಗಳ ಕೃಷಿಯನ್ನು ಮಾಡಿರುವ ಅನಿಲ್ ರವರ ಮಾದರಿ ತೋಟ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಳಂಜ ಫಾರ್ಮ್ ನ ಮ್ಯಾನೇಜರರಾದ ರಾಜ್ ನಾರಾಯಣರವರು ಮಾಹಿತಿ ನೀಡಿದರು.

ಭೇಟಿ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ರಾಜಶ್ರೀ, ಕೃಷ್ಣಾನಂದ, ರವಿಚಂದ್ರ , ಚಿತ್ರಾ ಪಿ ಎಚ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ, ಸದಸ್ಯರಾದ ಶೇಖರ್ ಕೊಲ್ಲಿಮಾರು, ಸುರೇಶ್ ಕನಿಕ್ಕಿಲರವರು ಜೊತೆಗಿದ್ದರು.

Related posts

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
error: Content is protected !!