September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಹಣ್ಣು ಹಂಪಲು ಕೃಷಿಕರಾದ ಅನಿಲ್ ಬಳಂಜರವರ ಕೃಷಿತೋಟದ ಸಂದರ್ಶನ ಆಯೋಜನೆಗೊಂಡಿತು.

ಆಸ್ಟ್ರೇಲಿಯಾ, ಸಿಂಗಾಪುರ, ಬ್ರೆಜಿಲ್, ಥಾಯ್ಲ್ಯಾಂಡ್, ಮಲೇಶಿಯಾ, ಅಮೇರಿಕಾ, ಆಫ್ರಿಕಾ, ಶ್ರೀಲಂಕಾ ಮೊದಲಾದ ವಿದೇಶೀ ತಳಿಗಳ ಜೊತೆಗೆ ಸ್ವದೇಶೀ ತಳಿಗಳೂ ಸರಿ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹಣ್ಣು ಹಂಪಲುಗಳ ಕೃಷಿಯನ್ನು ಮಾಡಿರುವ ಅನಿಲ್ ರವರ ಮಾದರಿ ತೋಟ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಳಂಜ ಫಾರ್ಮ್ ನ ಮ್ಯಾನೇಜರರಾದ ರಾಜ್ ನಾರಾಯಣರವರು ಮಾಹಿತಿ ನೀಡಿದರು.

ಭೇಟಿ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ರಾಜಶ್ರೀ, ಕೃಷ್ಣಾನಂದ, ರವಿಚಂದ್ರ , ಚಿತ್ರಾ ಪಿ ಎಚ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ, ಸದಸ್ಯರಾದ ಶೇಖರ್ ಕೊಲ್ಲಿಮಾರು, ಸುರೇಶ್ ಕನಿಕ್ಕಿಲರವರು ಜೊತೆಗಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ವಿದ್ಯಾರ್ಥಿಗಳಿಗೆ ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ನವೀನತೆ ಮತ್ತು ತಾಂತ್ರಿಕ ಕೌಶಲ್ಯ ತರಬೇತಿ

Suddi Udaya

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya
error: Content is protected !!