23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಹಣ್ಣು ಹಂಪಲು ಕೃಷಿಕರಾದ ಅನಿಲ್ ಬಳಂಜರವರ ಕೃಷಿತೋಟದ ಸಂದರ್ಶನ ಆಯೋಜನೆಗೊಂಡಿತು.

ಆಸ್ಟ್ರೇಲಿಯಾ, ಸಿಂಗಾಪುರ, ಬ್ರೆಜಿಲ್, ಥಾಯ್ಲ್ಯಾಂಡ್, ಮಲೇಶಿಯಾ, ಅಮೇರಿಕಾ, ಆಫ್ರಿಕಾ, ಶ್ರೀಲಂಕಾ ಮೊದಲಾದ ವಿದೇಶೀ ತಳಿಗಳ ಜೊತೆಗೆ ಸ್ವದೇಶೀ ತಳಿಗಳೂ ಸರಿ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹಣ್ಣು ಹಂಪಲುಗಳ ಕೃಷಿಯನ್ನು ಮಾಡಿರುವ ಅನಿಲ್ ರವರ ಮಾದರಿ ತೋಟ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಳಂಜ ಫಾರ್ಮ್ ನ ಮ್ಯಾನೇಜರರಾದ ರಾಜ್ ನಾರಾಯಣರವರು ಮಾಹಿತಿ ನೀಡಿದರು.

ಭೇಟಿ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ರಾಜಶ್ರೀ, ಕೃಷ್ಣಾನಂದ, ರವಿಚಂದ್ರ , ಚಿತ್ರಾ ಪಿ ಎಚ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ, ಸದಸ್ಯರಾದ ಶೇಖರ್ ಕೊಲ್ಲಿಮಾರು, ಸುರೇಶ್ ಕನಿಕ್ಕಿಲರವರು ಜೊತೆಗಿದ್ದರು.

Related posts

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya
error: Content is protected !!