July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ, ಹಳೆ ವಿದ್ಯಾರ್ಥಿ ಸಂಘ ಮತ್ತು ಶಿಕ್ಷಕ ರಕ್ಷಕ ಸಂಘದ ವತಿಯಿಂದ ಅಂತಾರಾಷ್ಟ್ರೀಯ ಖ್ಯಾತಿಯ ಹಣ್ಣು ಹಂಪಲು ಕೃಷಿಕರಾದ ಅನಿಲ್ ಬಳಂಜರವರ ಕೃಷಿತೋಟದ ಸಂದರ್ಶನ ಆಯೋಜನೆಗೊಂಡಿತು.

ಆಸ್ಟ್ರೇಲಿಯಾ, ಸಿಂಗಾಪುರ, ಬ್ರೆಜಿಲ್, ಥಾಯ್ಲ್ಯಾಂಡ್, ಮಲೇಶಿಯಾ, ಅಮೇರಿಕಾ, ಆಫ್ರಿಕಾ, ಶ್ರೀಲಂಕಾ ಮೊದಲಾದ ವಿದೇಶೀ ತಳಿಗಳ ಜೊತೆಗೆ ಸ್ವದೇಶೀ ತಳಿಗಳೂ ಸರಿ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹಣ್ಣು ಹಂಪಲುಗಳ ಕೃಷಿಯನ್ನು ಮಾಡಿರುವ ಅನಿಲ್ ರವರ ಮಾದರಿ ತೋಟ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಳಂಜ ಫಾರ್ಮ್ ನ ಮ್ಯಾನೇಜರರಾದ ರಾಜ್ ನಾರಾಯಣರವರು ಮಾಹಿತಿ ನೀಡಿದರು.

ಭೇಟಿ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ರಾಜಶ್ರೀ, ಕೃಷ್ಣಾನಂದ, ರವಿಚಂದ್ರ , ಚಿತ್ರಾ ಪಿ ಎಚ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ, ಸದಸ್ಯರಾದ ಶೇಖರ್ ಕೊಲ್ಲಿಮಾರು, ಸುರೇಶ್ ಕನಿಕ್ಕಿಲರವರು ಜೊತೆಗಿದ್ದರು.

Related posts

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

Suddi Udaya
error: Content is protected !!