23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

ಚಾರ್ಮಾಡಿ : ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಓರ್ವ ಮಹಿಳೆ ಮೃತಪಟ್ಟ ಘಟನೆ ಎ.9ರಂದು ರಾತ್ರಿ ನಡೆದಿದೆ.
ಉಜಿರೆ ನಿವಾಸಿ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿರುವಾಗ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು .

ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ (55) ಮೃತಪಟ್ಟ ದುರ್ದೈವಿಯಾಗಿದ್ದಾರೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ (62ವ) ಅವರ ಕೈಗೆ ಗಾಯವಾಗಿದ್ದು, ಪುತ್ರಿ ಪೂರ್ಣಿಮಾ ಶೆಟ್ಟಿ (38ವ) ಅವರ ತಲೆಗೆ ಗಂಭೀರ ಗಾಯವಾಗಿದೆ. ಮೊಮ್ಮಕ್ಕಳಾದ ಸಮೃದ್ (13ವ) ಹಾಗೂ ಸಾಕ್ಷಿ (11ವ) ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಚಾಲಕ ಸುರ್ಯ ರಸ್ತೆಯ ಅರುಣ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya
error: Content is protected !!