ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಉಜಿರೆ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಉಜಿರೆ ನಿವಾಸಿ ಸರೋಜಿನಿ ಶೆಟ್ಟಿ (55) ರವರು ಮೃತಪಟ್ಟಿದ್ದಾರೆ.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿರುವಾಗ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸರೋಜಿನಿ ಶೆಟ್ಟಿರವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ

ಇವರು ಉಜಿರೆ ನಿವಾಸಿಯಾಗಿದ್ದು ಓರ್ವ ಪುತ್ರರನ್ನು ಅಗಲಿದ್ದಾರೆ.

Leave a Comment

error: Content is protected !!