25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮವು ಗುರುವಾಯನಕೆರೆ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿತ್ತು.

ಎಸ್‌ಡಿಪಿಐ ವಿಧಾನಸಭಾ ಅಧ್ಯಕ್ಷರಾದ ನವಾಝ್ ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ದೇಶದಲ್ಲಿ ನಡೆಯುತ್ತಿರುವ ಅರಾಜಕತೆಯನ್ನು ಎದುರಿಸಲು ತಮ್ಮ ವೈಯುಕ್ತಿಕ ಹಿತಾಸಕ್ತಿಗಳನ್ನು ಮರೆತು ಮುಸ್ಲಿಮರು ಒಂದಾಗಬೇಕು ಎಂದು ಕರೆಯಿತ್ತರು.

ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭಾಗವಹಿಸಿದ್ದರು.

ಇನ್ನೋರ್ವ ಮುಖ್ಯ ಅತಿಥಿ ಪ್ರಗತಿಪರ ಹೋರಾಟಗಾರ, ಚಿಂತಕ ದಾಮೋದರ್ ಬೆಳ್ತಂಗಡಿ ಮಾತನಾಡಿ, ಇಫ್ತಾರ್ ಮಹತ್ವದ ಬಗ್ಗೆ ಹಾಗೂ ಮುಂಬರುವ ಚುನಾವಣೆ ನಮಗೆ ಎಷ್ಟು ಮುಖ್ಯ ಮತ್ತು ಯಾವ ರೀತಿ ಚುನಾವಣೆಯನ್ನು ನಾವು ಎದುರಿಸಬೇಕೆಂದು ತಿಳಿಸಿದರು.

ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ ಸಮಾರೋಪ ಮಾತನ್ನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲ, ಅಶ್ರಫ್ ಕಟ್ಟೆ, ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಅಝೀಝ್ ಝುಹರಿ, ಬೆಳ್ತಂಗಡಿ ತಾಲೂಕಿನ ಜಮಾಅತ್ ಬಾಂಧವರು ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಹಲವು ನಾಯಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya
error: Content is protected !!