July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ರಾಜ್ಯ ಅಮೆಚೂರ್ ಸಂಸ್ಥೆ ಬೆಂಗಳೂರಿನ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರನ್ನಾಗಿ ಆಯ್ಕೆಮಾಡಿದ್ದಾರೆ.
ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿಯಾಗಿ, ಪ್ರಸ್ತುತ ನಾರಾವಿ ಉನ್ನತೀಕರಿಸಿದ ಮಾಧ್ಯಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಹಾಗೂ ಕಳೆದ 10 ವರ್ಷಗಳಿಂದ ತಾಲೂಕು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.
23 ವರ್ಷ ತೀರ್ಪುಗಾರಿಕೆಯ ಅನುಭವ ಹಾಗೂ ತಮ್ಮ ಸಂಘಟನಾ ಅನುಭವದ ಮೇರೆಗೆ ಇಂದು ರಾಜ್ಯ ಮಟ್ಟದ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರಾಗಿ 5 ಜಿಲ್ಲೆಯ ಉಸ್ತುವಾರಿಯಾಗಿ ಆಯ್ಕೆಯಾಗಿದ್ದಾರೆ.

Related posts

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya
error: Content is protected !!