23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ರಾಜ್ಯ ಅಮೆಚೂರ್ ಸಂಸ್ಥೆ ಬೆಂಗಳೂರಿನ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರನ್ನಾಗಿ ಆಯ್ಕೆಮಾಡಿದ್ದಾರೆ.
ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿಯಾಗಿ, ಪ್ರಸ್ತುತ ನಾರಾವಿ ಉನ್ನತೀಕರಿಸಿದ ಮಾಧ್ಯಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಹಾಗೂ ಕಳೆದ 10 ವರ್ಷಗಳಿಂದ ತಾಲೂಕು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.
23 ವರ್ಷ ತೀರ್ಪುಗಾರಿಕೆಯ ಅನುಭವ ಹಾಗೂ ತಮ್ಮ ಸಂಘಟನಾ ಅನುಭವದ ಮೇರೆಗೆ ಇಂದು ರಾಜ್ಯ ಮಟ್ಟದ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರಾಗಿ 5 ಜಿಲ್ಲೆಯ ಉಸ್ತುವಾರಿಯಾಗಿ ಆಯ್ಕೆಯಾಗಿದ್ದಾರೆ.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya
error: Content is protected !!