July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ರಾಜ್ಯ ಅಮೆಚೂರ್ ಸಂಸ್ಥೆ ಬೆಂಗಳೂರಿನ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರನ್ನಾಗಿ ಆಯ್ಕೆಮಾಡಿದ್ದಾರೆ.
ತಾಲೂಕು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿ, ತಾಲೂಕು ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿಯಾಗಿ, ಪ್ರಸ್ತುತ ನಾರಾವಿ ಉನ್ನತೀಕರಿಸಿದ ಮಾಧ್ಯಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಹಾಗೂ ಕಳೆದ 10 ವರ್ಷಗಳಿಂದ ತಾಲೂಕು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.
23 ವರ್ಷ ತೀರ್ಪುಗಾರಿಕೆಯ ಅನುಭವ ಹಾಗೂ ತಮ್ಮ ಸಂಘಟನಾ ಅನುಭವದ ಮೇರೆಗೆ ಇಂದು ರಾಜ್ಯ ಮಟ್ಟದ ತೀರ್ಪುಗಾರರ ಮಂಡಳಿಯ ರಾಜ್ಯ ಸಂಚಾಲಕರಾಗಿ 5 ಜಿಲ್ಲೆಯ ಉಸ್ತುವಾರಿಯಾಗಿ ಆಯ್ಕೆಯಾಗಿದ್ದಾರೆ.

Related posts

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!