23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

ಬೆಳ್ತಂಗಡಿ: ಪರವಾನಗಿ ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆ ಸುಪರ್ದಿಗೆ ಒಪ್ಪಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿ ಎ.6ರಂದು ಪರಿಷ್ಕೃತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಆಯುಧಗಳ ಪರವಾನಗಿದಾರರು ಏ.13ರ ಮೊದಲು ಆಯುಧ ಶಸ್ತಾಸ್ತ್ರಗಳನ್ನು ಠೇವಣಿ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959 ರ ಕಲಂ 17(3) (ಬಿ) ಅನ್ವಯ, ಮಾ.30ರಂದು ಹೊರಡಿಸಿದ್ದ ಆದೇಶದಲ್ಲಿ ಜಿಲ್ಲೆಯಲ್ಲಿರುವ ಬೆಳೆ ರಕ್ಷಣೆ ಹಾಗೂ ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಎ.24ರ ಒಳಗಾಗಿ ಜಮಾ ಮಾಡುವಂತೆ ಆದೇಶ ಹೊರಡಿಸಿದ್ದರು. ಎ.6ರಂದು ಆದೇಶವನ್ನು ಮಾರ್ಪಡಿಸಲಾಗಿದ್ದು, ಎ.13ರ ಒಳಗಾಗಿ ಪೊಲೀಸ್ ಠಾಣಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಆಯುಧ ಇಡುವಂತೆ ಪ್ರಕಟಣೆ ಹೊರಡಿಸಲಾಗಿದೆ.

Related posts

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya
error: Content is protected !!