ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

ಕಾಶಿಪಟ್ಣ : ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಸ್ವಚ್ಛತೆ ಭಾಂದವ್ಯ ಸಮಯ ಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿ ಪಡಿಸುತ್ತದೆ. ಇಂಥಹ ಗುಣಗಳು ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಉತ್ತಮ ನಾಗರಿಕನಾಗುವಂತೆ ಮಾಡಲು ಒಂದು ದಾರಿಯಾಗಿದೆ. ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಎನ್‌.ಎಸ್‌.ಎಸ್ ಒಂದು ಉತ್ತಮ ವೇದಿಕೆ ಎಂದು ಯು. ನಾರಾಯಣ ಭಟ್ ಕೆಲ್ಲಗುತ್ತು ಅವರು ಹೇಳಿದರು.

ಇವರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕೇಳದಪೇಟೆ ಕಾಶಿಪಟ್ಣ ಇಲ್ಲಿ ನಡೆಯುತ್ತಿರುವ ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2022-23 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂತ ಅಂತೋನಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂ ಡಾ. ಅಲ್ವಿನ್ ಸರಾವೋ ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ದ.ಕ.ಜಿ, ಪಂ ಹಿರಿಯ ಪ್ರಾಥಮಿಕ ಶಾಲೆ ಕೇಳದಪೇಟೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಎ ಮಾತನಾಡಿ “ಮಕ್ಕಳಿಗೆ ಭೌತಿಕ ಕಲಿಕೆಯ ಜೊತೆಗೆ ಪ್ರಾಯೋಗಿಕ ಕಲಿಕೆಯು ಆತೀಮುಖ್ಯ” ಎಂದರು.

ವೇದಿಕೆಯಲ್ಲಿ ದ.ಕ.ಜಿ. ಈ ಹಿರಿಯ ಪ್ರಾಥಮಿಕ ಶಾಲೆ ಕೇಳದಪೇಟೆ ಇಲ್ಲಿನ ಎಸ್.ಡಿ.ಎಂ.ಸಿ ಅಧ್ಯಕ್ಷ ಪ್ರಕಾಶ್ ಮಜಲಡ್ಕ, ಹರೀಶ್ ಗೊಲ್ಲ ಕುಕ್ಕಾಜೆ, ಸುಭಾಶ್ ಶೆಟ್ಟಿ, ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿನೇಶ್ ಬಿ.ಕೆ ಸ್ವಾಗತಿಸಿದರು. ಸಹಶಿಬಿರಾಧಿಕಾರಿ ಅವಿನಾಶ್ ಲೋಬೋ ಎಲ್ಲರಿಗೂ ಧನ್ಯವಾದವಿತ್ತರು. ಉಪನ್ಯಾಸಕರಾದ ಸಂತೋಷ್‌ ಕಾರ್ಯಕ್ರಮವನ್ನು ನಿರೂಪಿಸಿದರು. ನಿಕಟಪೂರ್ವ ಯೋಜನಾಧಿಕಾರಿ ಅವಿಲ್ ಮೋರಾಸ್, ಉಪನ್ಯಾಸಕ ಪ್ರದೀಪ್ ಬಿ.. ಕುಮಾರಿ ಆಶ್ವಿತಾ ಸೆರಾವೋ ಹಾಗೂ ಎನ್.ಎಸ್.ಎಸ್‌ ಕಾರ್ಯದರ್ಶಿ ಸುಹಾಸ್ ಹೆಗ್ಡೆ, ಕುಮಾರಿ ನವ್ಯಶ್ರೀ ಸಹಕರಿಸಿದರು.

Related posts

ಭಾರೀ ಮಳೆಗೆ ತುಂಬಿ ಹರಿದ ಅಂಬಡೆಬೆಟ್ಟು ಸೇತುವೆ ನದಿ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!