July 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ರೂ.10 ಲಕ್ಷ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು.

ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ ದಾಖಲೆಗಳಿಲ್ಲದೆ ಅವಧಿ ಮೀರಿ ರೂ.10 ಲಕ್ಷ ಮೊತ್ತವನ್ನು ರಾತ್ರಿ 10 ಗಂಟೆ ಸುಮಾರಿಗೆ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು , ತಕ್ಷಣವೇ ಹಣ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya
error: Content is protected !!