24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

ಬೆಳ್ತಂಗಡಿ: ಪರವಾನಗಿ ಹೊಂದಿರುವ ಆಯುಧಗಳನ್ನು ಪೊಲೀಸ್ ಠಾಣೆ ಸುಪರ್ದಿಗೆ ಒಪ್ಪಿಸುವ ವಿಚಾರದಲ್ಲಿ ಜಿಲ್ಲಾಧಿಕಾರಿ ಎ.6ರಂದು ಪರಿಷ್ಕೃತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಆಯುಧಗಳ ಪರವಾನಗಿದಾರರು ಏ.13ರ ಮೊದಲು ಆಯುಧ ಶಸ್ತಾಸ್ತ್ರಗಳನ್ನು ಠೇವಣಿ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959 ರ ಕಲಂ 17(3) (ಬಿ) ಅನ್ವಯ, ಮಾ.30ರಂದು ಹೊರಡಿಸಿದ್ದ ಆದೇಶದಲ್ಲಿ ಜಿಲ್ಲೆಯಲ್ಲಿರುವ ಬೆಳೆ ರಕ್ಷಣೆ ಹಾಗೂ ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವವರು ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಎ.24ರ ಒಳಗಾಗಿ ಜಮಾ ಮಾಡುವಂತೆ ಆದೇಶ ಹೊರಡಿಸಿದ್ದರು. ಎ.6ರಂದು ಆದೇಶವನ್ನು ಮಾರ್ಪಡಿಸಲಾಗಿದ್ದು, ಎ.13ರ ಒಳಗಾಗಿ ಪೊಲೀಸ್ ಠಾಣಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಆಯುಧ ಇಡುವಂತೆ ಪ್ರಕಟಣೆ ಹೊರಡಿಸಲಾಗಿದೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya
error: Content is protected !!