24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

ಪುದುವೆಟ್ಟು : ಬೆಳ್ತಂಗಡಿ ತಾಲೂಕಿನ ಪುದುವೆಟ್ಟಿನ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ತನ್ನ ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಎ.10ರಂದು ನಡೆದಿರುವುದು ವರದಿಯಾಗಿದೆ.

ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತಪಟ್ಟವರಾಗಿದ್ದಾರೆ. 2017ರಲ್ಲಿ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ಬಾಲಕೃಷ್ಣ ಎಂಬವರ ಮಗಳಾದ ಪುಣ್ಯಶ್ರೀ ಅವರನ್ನು ಪುರುಷೋತ್ತಮ ಅವರು ವಿವಾಹವಾಗಿದ್ದು, ಇವರಿಗೆ 5 ಮತ್ತು 3 ವರ್ಷದ ಇಬ್ಬರು ಮಕ್ಕಳಿದ್ದಾರೆ.

ಎ.4 ರಂದು ಪುಣ್ಯಶ್ರೀಯವರು ತನ್ನ ಇಬ್ಬರು ಮಕ್ಕಳೊಂದಿಗೆ ಆಕೆಯ ತವರು ಮನೆಯಾದ ಗುಮ್ಮಟಗದ್ದೆಗೆ ಹೋಗಿದ್ದು, ಬಳಿಕ ಅಲ್ಲಿಯೇ ಇದ್ದರು. ಎ.10 ರಂದು ಮಧ್ಯಾಹ್ನ ಪುರುಷೋತ್ತಮರವರು ಪುಣ್ಯಶ್ರೀಯವರಿಗೆ ಮೊಬೈಲ್ ಕರೆ ಮಾತನಾಡಿದ್ದರು. ಸಂಜೆ ಪುಣ್ಯಶ್ರೀಯವರು ತನ್ನ ಗಂಡ ಪುರುಷೋತ್ತಮ ಅವರಿಗೆ ವಿಡಿಯೋ ಕರೆ ಮಾಡಿ ಮಾತನಾಡಿದ್ದರು. ಅದೇ ದಿನ ರಾತ್ರಿ 10.24 ಗಂಟೆಗೆ ಪುರುಷೋತ್ತಮ ಅವರಿಗೆ ಪುಣ್ಯಶ್ರೀಯ ಚಿಕ್ಕಮ್ಮ ಲತಾ ಎಂಬವರು ಕರೆ ಮಾಡಿ, ರಾತ್ರಿ ಸುಮಾರು 10.00 ಗಂಟೆಯ ವೇಳೆಗೆ ಪುಣ್ಶಶ್ರೀಯು ತಮ್ಮ ಮನೆಯ ಬಳಿಗೆ ಬಂದು ತಾನು ಸಾಯುವುದಾಗಿ ಹೇಳಿ ಏಕಾಏಕಿ ತಮ್ಮ ಬಾವಿಗೆ ಹಾರಿರುವುದಾಗಿ ಮಾಹಿತಿ ನೀಡಿದ್ದರು. ಅದರಂತೆ ಪುರುಷೋತ್ತಮ ಅವರು ಕೂಡಲೇ ತನ್ನ ಪುದುವೆಟ್ಟಿನ ಮನೆಯಿಂದ ಹೊರಟು ಗುಮ್ಮಟಗದ್ದೆಗೆ ಬಂದಾಗ ಪುಣ್ಶಶ್ರೀಯನ್ನು ಬಾವಿಯ ನೀರಿನಿಂದ ಮೇಲಕ್ಕೆತ್ತಿದ್ದು, ಬಳಿಕ ಪುಣ್ಶಶ್ರೀಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯಾಧಿಕಾರಿಯವರು ಪುಣ್ಯಶ್ರೀಯು ಮೃತಪಟ್ಟಿರುವುದಾಗಿ ತಿಳಿಸಿದ್ದರು.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಯುಡಿಆರ್ ನಂಬ್ರ 09/2023 ಕಲಂ: 174 (3) (iv) ಸಿ ಆರ್ ಪಿ ಸಿ. ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!