September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಬಂದಾರು ಗ್ರಾಮದ ಮೈರೋಳ್ತಡ್ಕ ಒಕ್ಕೂಟದಲ್ಲಿ ಆರಂಭಗೊಂಡ ಶಾಂಭವಿ ಜ್ಞಾನ ವಿಕಾಸ ಕೇಂದ್ರವು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷಗಳಿಂದ ನಡೆದು ಬಂದಿದ್ದು, ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ, ಕೌಟುಂಬಿಕ ಸಾಮರಸ್ಯ, ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ತಮ ರೀತಿಯ ಅಭಿವೃದ್ಧಿ ಹೊಂದಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರ ವನ್ನು ನೀಡಲಾಯಿತು.

ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಗಿರಿಜಾ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
error: Content is protected !!