ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಬೆಳ್ತಂಗಡಿ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಓಡಿಲ್ನಾಳದ ರತ್ನಾಕರ ಎಂಬವರು ಬೆಳ್ತಂಗಡಿ ಕಸಬದ ಕೆಲ್ಲಗುತ್ತು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.

ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಈ ಕಾಯಾ೯ಚರಣೆ ನಡೆಯಿತು.
ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 17,280ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. , ಪರಾರಿಯಾದ ಆರೋಪಿಯ ವಿರುದ್ದ ಮೊಕದ್ದಮೆಯನ್ನು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ವಾಹನ ಹಾಗೂ ಸೊತ್ತಿನ ಒಟ್ಟು ಮೌಲ್ಯ ಸುಮಾರು 3,31,720/- ಆಗಿದೆ.
ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ

Leave a Comment

error: Content is protected !!