23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

ಬೆಳ್ತಂಗಡಿ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಓಡಿಲ್ನಾಳದ ರತ್ನಾಕರ ಎಂಬವರು ಬೆಳ್ತಂಗಡಿ ಕಸಬದ ಕೆಲ್ಲಗುತ್ತು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.

ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು, ದಕ್ಷಿಣ ಕನ್ನಡ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಈ ಕಾಯಾ೯ಚರಣೆ ನಡೆಯಿತು.
ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 17,280ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. , ಪರಾರಿಯಾದ ಆರೋಪಿಯ ವಿರುದ್ದ ಮೊಕದ್ದಮೆಯನ್ನು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ವಾಹನ ಹಾಗೂ ಸೊತ್ತಿನ ಒಟ್ಟು ಮೌಲ್ಯ ಸುಮಾರು 3,31,720/- ಆಗಿದೆ.
ಪ್ರಕರಣವನ್ನು ಸಯ್ಯದ್ ಶಬೀರ್ ಅಬಕಾರಿ ಉಪ ನಿರೀಕ್ಷಕರು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya

ಬೆಳ್ತಂಗಡಿ: ಪವರ್ ಆನ್‌ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10ರಿಂದ 50 ರಷ್ಟು ರಿಯಾಯಿತಿ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya
error: Content is protected !!