23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

ಉಜಿರೆ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.

ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು. ದಕ್ಷಿಣ ಕನ್ನಡ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಈ ಕಾಯಾ೯ಚರಣೆ ನಡೆಯಿತು.

ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 8,640ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಆರೋಪಿಯ ವಿರುದ್ದ ಮೊಕದ್ದಮೆಯನ್ನು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ವಾಹನ ಹಾಗೂ ಸೊತ್ತಿನ ಒಟ್ಟು ಮೌಲ್ಯ ಸುಮಾರು ರೂ.1,53,360 ಆಗಿರುತ್ತದೆ.

ಪ್ರಕರಣವನ್ನು ನವೀನ್ ಕುಮಾರ್‌ ಅಬಕಾರಿ ನಿರೀಕ್ಷಕರು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya
error: Content is protected !!