22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ , ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಹಾಗೂ ಪಟ್ಟೂರು ಶ್ರೀ ರಾಮ ವಿದ್ಯಾಸಂಸ್ಥೆ ಇವುಗಳ ಸಹಯೋಗದಲ್ಲಿ 12ರಿಂದ 16 ರ ವಯೋಮಾನದ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರವು ಎ.12ರಿಂದ 16ರವರೆಗೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಗಣೇಶ ಕಲಾಮಂದಿರದಲ್ಲಿ ಜರುಗಲಿದ್ದು ಇದರ ಉದ್ಘಾಟನಾ ಸಮಾರಂಭವು ಎ.12 ರಂದು ಜರುಗಿತು.

ಉದ್ಘಾಟನೆಯನ್ನು ಕೊಕ್ಕಡ ಕೆನರಾ ಬ್ಯಾಂಕಿನ ಮೆನೇಜರ್ ಅಂಕಿತ್‌ ಸಿಂಗ್ ನೆರವೇರಿಸಿ, ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ರಾವ್ ಮುಂಡ್ರುಪ್ಪಾಡಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆರ್.ಎಸ್.ಎಸ್ ಮುಖಂಡ ಕೃಷ್ಣ ಭಟ್ ಆಗಮಿಸಿದ್ದರು.

ಶ್ರೀ ರಾಮ ವಿದ್ಯಾಸಂಸ್ಥೆ ಪಟ್ಟೂರಿನ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಶೇಟ್‌ ಸ್ವಾಗತಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪುರಂದರ ಗೌಡ ಕೆ ಧನ್ಯವಾದವಿತ್ತರು. ಶ್ರೀ ರಾಮ ವಿದ್ಯಾಸಂಸ್ಥೆಯ ಮಾತಾಜಿ ಸುಪ್ರಿತಾ ಎ ಕಾರ್ಯಕ್ರಮ ನಿರೂಪಿಸಿದರು.

Related posts

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ ನವೀಕರಣಗೊಂಡ ಮಹಿಳಾ ಚಿಕಿತ್ಸಾ ವಿಭಾಗ “ಸಿಂದೂರ”ಲೋಕಾರ್ಪಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya
error: Content is protected !!