ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣರವರು ಬಿಜೆಪಿಯ ಟಿಕೆಟ್ ಘೋಷಣೆಗೂ ಮುನ್ನವೇ ಎ.9 ರಂದು ಭೇಟಿಯಾಗಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು.

ನಂತರ ಯಶ್ ಪಾಲ್ ಸುವರ್ಣರವರು ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನವಶಕ್ತಿಯ ರಾಜೇಶ್ ಶೆಟ್ಟಿ, ಉಜಿರೆಯ ಉದ್ಯಮಿ ರವಿಚಕ್ಕಿತ್ತಾಯ, ಯಶ್ ಪಾಲ್ ಸುವರ್ಣರ ಸಂಬಂಧಿಕರು ಉಪಸ್ಥಿತರಿದ್ದರು.

Leave a Comment

error: Content is protected !!