September 6, 2026
ತಾಲೂಕು ಸುದ್ದಿ

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿಶಿಲ: 2022-23 ಮತ್ತು 2023- 24ನೇ ಸಾಲಿನಲ್ಲಿ ಕರ್ನಾಟಕ ಸರಕಾರ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿ ಪ್ರಸಾದ್ ಇವರ ಯೋಜನೆಯಡಿ ಯಾವುದೇ ಅನುದಾನ ಮಂಜೂರಾಗಿರುವುದಿಲ್ಲ ಎಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಬೆಳ್ತಂಗಡಿಯ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಲಿಖಿತ ಮಾಹಿತಿ ನೀಡಿದ್ದಾರೆ.


ಶಿಶಿಲ ಗ್ರಾಮದ ಪಡ್ಪು ಮನೆ ನಿವಾಸಿ ಕೊರಗಪ್ಪ ಗೌಡ ಇವರು ಮಾಹಿತಿ ಹಕ್ಕಿನಲ್ಲಿ ಕೇಳಿದ ಮಾಹಿತಿಗೆ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಈ ಮಾಹಿತಿಯನ್ನು ನೀಡಿದ್ದು, ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್‌ರವರು ಮಾಧ್ಯಮಗಳಿಗೆ ನೀಡಿದ ತಮ್ಮ ಪರಿಚಯದ ವಿವರದಲ್ಲಿ ವಿಧಾನ ಪರಿಷತ್ ಮತ್ತು ಸಂಸದರ ಸಂಪರ್ಕ ಮಾಡಿ ಬೆಳ್ತಂಗಡಿ ತಾಲೂಕಿನಲ್ಲಿ ಅನುದಾನ ನೀಡಿದ ವಿವರ ನೀಡಿದ್ದರು. ಇದರಲ್ಲಿ ಶಿಶಿಲದ ಹೇವಾಜೆ ಶಾಲೆಗೆ ರೂ. 2ಲಕ್ಷ ಅನುದಾನ ಕೊಟ್ಟಿರುವುದಾಗಿ ನಮೂದಿಸಲಾಗಿದ್ದು, ಇದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದಕ್ಕೆ ಕೊರಗಪ್ಪ ಗೌಡರವರು ರಕ್ಷಿತ್ ಶಿವರಾಂ ಹೇವಾಜೆ ಶಾಲೆಗೆ ಯಾವುದೇ ಅನುದಾನ ನೀಡಿಲ್ಲ ಎಂದು ಹೇಳಿರುವ ವಾಯ್ಸ್ ರೆಕಾರ್ಡ್ ಕೂಡಾ ನಂತರ ವೈರಲ್ ಆಗಿತ್ತು.
ಈ ಬಗ್ಗೆ ರಕ್ಷಿತ್ ಶಿವರಾಂ ಕಡೆಯಿಂದ ಮಂಜೂರಾತಿ ಪತ್ರ ನೀಡಿದ್ದನ್ನು ಸ್ಥಳೀಯ ಪತ್ರಿಕೆ ಪ್ರಕಟಿಸಿತ್ತು. ಇದರ ನಂತರದ ಬೆಳವಣಿಗೆಯಾಗಿ ಕೊರಗಪ್ಪ ಗೌಡರು ಮಾಹಿತಿ ಹಕ್ಕಿನಲ್ಲಿ ಈ ವಿವರನ್ನು ಕೇಳಿದ್ದು, ಬಿ.ಕೆ ಹರಿಪ್ರಸಾದ್‌ರವರಿಂದ ಯಾವುದೇ ಅನುದಾನ ಮಂಜೂರಾಗಿರುವುದಿಲ್ಲ ಎಂದು ಅಧಿಕಾರಿ ಕೊಟ್ಟಿರುವ ಲಿಖಿತ ಉತ್ತರ ಈಗ ಇದು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.

Related posts

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

Suddi Udaya
error: Content is protected !!