22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿಶಿಲ: 2022-23 ಮತ್ತು 2023- 24ನೇ ಸಾಲಿನಲ್ಲಿ ಕರ್ನಾಟಕ ಸರಕಾರ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿ ಪ್ರಸಾದ್ ಇವರ ಯೋಜನೆಯಡಿ ಯಾವುದೇ ಅನುದಾನ ಮಂಜೂರಾಗಿರುವುದಿಲ್ಲ ಎಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಬೆಳ್ತಂಗಡಿಯ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಲಿಖಿತ ಮಾಹಿತಿ ನೀಡಿದ್ದಾರೆ.


ಶಿಶಿಲ ಗ್ರಾಮದ ಪಡ್ಪು ಮನೆ ನಿವಾಸಿ ಕೊರಗಪ್ಪ ಗೌಡ ಇವರು ಮಾಹಿತಿ ಹಕ್ಕಿನಲ್ಲಿ ಕೇಳಿದ ಮಾಹಿತಿಗೆ ಇಲಾಖೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಈ ಮಾಹಿತಿಯನ್ನು ನೀಡಿದ್ದು, ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್‌ರವರು ಮಾಧ್ಯಮಗಳಿಗೆ ನೀಡಿದ ತಮ್ಮ ಪರಿಚಯದ ವಿವರದಲ್ಲಿ ವಿಧಾನ ಪರಿಷತ್ ಮತ್ತು ಸಂಸದರ ಸಂಪರ್ಕ ಮಾಡಿ ಬೆಳ್ತಂಗಡಿ ತಾಲೂಕಿನಲ್ಲಿ ಅನುದಾನ ನೀಡಿದ ವಿವರ ನೀಡಿದ್ದರು. ಇದರಲ್ಲಿ ಶಿಶಿಲದ ಹೇವಾಜೆ ಶಾಲೆಗೆ ರೂ. 2ಲಕ್ಷ ಅನುದಾನ ಕೊಟ್ಟಿರುವುದಾಗಿ ನಮೂದಿಸಲಾಗಿದ್ದು, ಇದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಇದಕ್ಕೆ ಕೊರಗಪ್ಪ ಗೌಡರವರು ರಕ್ಷಿತ್ ಶಿವರಾಂ ಹೇವಾಜೆ ಶಾಲೆಗೆ ಯಾವುದೇ ಅನುದಾನ ನೀಡಿಲ್ಲ ಎಂದು ಹೇಳಿರುವ ವಾಯ್ಸ್ ರೆಕಾರ್ಡ್ ಕೂಡಾ ನಂತರ ವೈರಲ್ ಆಗಿತ್ತು.
ಈ ಬಗ್ಗೆ ರಕ್ಷಿತ್ ಶಿವರಾಂ ಕಡೆಯಿಂದ ಮಂಜೂರಾತಿ ಪತ್ರ ನೀಡಿದ್ದನ್ನು ಸ್ಥಳೀಯ ಪತ್ರಿಕೆ ಪ್ರಕಟಿಸಿತ್ತು. ಇದರ ನಂತರದ ಬೆಳವಣಿಗೆಯಾಗಿ ಕೊರಗಪ್ಪ ಗೌಡರು ಮಾಹಿತಿ ಹಕ್ಕಿನಲ್ಲಿ ಈ ವಿವರನ್ನು ಕೇಳಿದ್ದು, ಬಿ.ಕೆ ಹರಿಪ್ರಸಾದ್‌ರವರಿಂದ ಯಾವುದೇ ಅನುದಾನ ಮಂಜೂರಾಗಿರುವುದಿಲ್ಲ ಎಂದು ಅಧಿಕಾರಿ ಕೊಟ್ಟಿರುವ ಲಿಖಿತ ಉತ್ತರ ಈಗ ಇದು ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.

Related posts

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya
error: Content is protected !!