22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಇದರ 12ನೇ ವರ್ಷದ ವಾರ್ಷಿಕ ಮಹಾಸಭೆಯು ಎ.11 ರಂದು ಸಂಘದ ಅಧ್ಯಕ್ಷ ಎಸ್. ಉಮೇಶ್ ಭಂಡಾರಿ ಉಜಿರೆ ಇವರ ಅಧ್ಯಕ್ಷತೆಯಲ್ಲಿ ಪಣೆಜಾಲು ಭಂಡಾರಿ ಸಮಾಜ ಸಂಘದ ಆವರಣದಲ್ಲಿ ಜರುಗಿತು.


ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ಸತೀಶ್ ಭಂಡಾರಿ ಕರಿಂಜೆ ಕಾರ್ಯಕ್ರಮ ಉದ್ಘಾಟಿಸಿದರು.
ಸವಿತಾ ಸಮಾಜ ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ತಾಲೂಕು ಭಂಡಾರಿ ಯುವ ವೇದಿಕೆಯ ಸದಸ್ಯರನ್ನು ಹಾಗೂ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ನಿಸ್ವಾರ್ಥವಾಗಿ ತನ್ನನ್ನು ತೊಡಗಿಸಿಕೊಳ್ಳುವ ಹಾಗೂ ಸಕ್ರೀಯವಾಗಿ ಪಾಲ್ಗೊಳ್ಳುವ ಚಂದ್ರಶೇಖರ ಭಂಡಾರಿ ಗುರುವಾಯನಕೆರೆ ಇವರನ್ನು ಗೌರವಿಸಲಾಯಿತು.


ವೇದಿಕೆಯಲ್ಲಿ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಉಪಾಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಕಾರ್ಕಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಶೇಖರ ಭಂಡಾರಿ ಕಾರ್ಕಳ, ಬೆಳ್ತಂಗಡಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಭಂಡಾರಿ ಪರಾರಿ, ಕಾರ್ಕಳ ಭಂಡಾರಿ ಸಮಾಜ ಸಂಘದ ಸಂಘಟನಾ ಕಾರ್ಯದರ್ಶಿ ಸದಾಶಿವ ಭಂಡಾರಿ, ಉತ್ಸವ ಸಮಿತಿ ಜೊತೆ ಕಾರ್ಯದರ್ಶಿ ಕೃಷ್ಣ ಭಂಡಾರಿ ಕಾರ್ಕಳ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಭಂಡಾರಿ ಹೆಬ್ರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ 2023ರ ವಾರ್ಷಿಕ ಉತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತ್ಯೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಾರ್ಕೂರು ಕಚ್ಚೂರು ಶ್ರೀ ನಾಗೇಶ್ವರ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಭಂಡಾರಿ ಬಿರ್ತಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸತೀಶ್ ಭಂಡಾರಿ ನಾಳ ಪ್ರಾರ್ಥಿಸಿ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡಿಯಲ್ಕೆ ಸಂಘದ ವಾರ್ಷಿಕ ವರದಿ ವಾಚಿಸಿದರು. ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಕೋಡ್ಯೇಲು ಸ್ವಾಗತಿಸಿ, ಬೆಳ್ತಂಗಡಿ ತಾಲೂಕು ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ವಂದಿಸಿದರು. ಸಂಘದ ಜತೆ ಕಾರ್ಯದರ್ಶಿ ನಾರಾಯಣ ಬಿ ಕುಂಡದಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

Related posts

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya
error: Content is protected !!