September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಪಾಸಣೆ ನಡೆಸಿದ್ದಾರೆ‌.

ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.

Related posts

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಮ್ಮ ಮನೆ ಶಾಖೆಯ ವಾರ್ಷಿಕೋತ್ಸವ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya
error: Content is protected !!