22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

ವೇಣೂರು: ಎನೆಸ್ಸೆಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸ್ವಚ್ಛತೆ, ಬಾಂಧವ್ಯ, ಸ್ವಯಂಪರಿಪಾಲನೆ ಮುಂತಾದ ಗುಣಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ಯು. ನಾರಾಯಣ ಭಟ್ ಕೇಳಗುತ್ತು ಹೇಳಿದರು.
ಕಾಶಿಪಟ್ಣ ಕೇಳ ದ.ಕ.ಜಿ.ಪಂ. ಹಿರಿಯ ಪಾಥಮಿಕ ಶಾಲೆಯಲ್ಲಿ ನಡೆದ ನಾರಾವಿ ಸಂತ ಅಂತೋನಿ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ 2022-23ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.


ಕಾಲೇಜಿನ ಪ್ರಾಚಾರ್ಯ ವಂ| ಡಾ. ಆಲ್ವಿನ್ ಸೆರಾವೋ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಶಿಬಿರದ ಯಶಸ್ವಿಗೆ ಶುಭ ಹಾರೈಸಿದರು.

ಕೇಳದಪೇಟೆ ಸ.ಹಿ.ಪ್ರಾ. ಶಾಲೆಯ ಮುಖ್ಯಶಿಕ್ಷಕ ಪ್ರಶಾಂತ್ ಎ., ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಮಜಲಡ್ಡ, ಹರೀಶ್ ಗೊಲಿ ಕುಕ್ಕಾಜೆ, ಸುಭಾಶ್ ಶೆಟ್ಟಿ ಹೊಗೆದಿಡ್ಡು, ನಿಕಟಪೂರ್ವ ಯೋಜನಾಧಿಕಾರಿ ಅವಿಲ್ ಮೋರಾಸ್, ಉಪನ್ಯಾಸಕ ಪ್ರದೀಪ್ ಬಿ., ಕುಮಾರಿ ಅಶ್ವಿತಾ ಸೆರಾವೋ, ಎನ್ನೆಸ್ಸೆಸ್ ಕಾರ್ಯದರ್ಶಿಗಳಾದ ಸುಹಾಸ್ ಹೆಗ್ಸೆ, ನವ್ಯಶ್ರೀ ಉಪಸ್ಥಿತರಿದ್ದರು.
ಶಿಬಿರದ ಯೋಜನಾಧಿಕಾರಿ ದಿನೇಶ್ ಬಿ.ಕೆ. ಸ್ವಾಗತಿಸಿದರು. ಸಹಶಿಬಿರಾಧಿಕಾರಿ ಅವಿನಾಶ್ ಲೋಬೋ ವಂದಿಸಿದರು. ಉಪನ್ಯಾಸಕ ಸಂತೋಷ್ ನಿರೂಪಿಸಿದರು.

Related posts

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya
error: Content is protected !!