37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಎ.12 ರಂದು ರಾತ್ರಿ 11.30ಸುಮಾರಿಗೆ ಸಂಭವಿಸಿದೆ.
ಇಲ್ಲಿ ಸುಮಾರು ಹತ್ತು ಎಕ್ರೆ ಜಮೀನು ಬಂಡೆಕಲ್ಲುಗಳಿಂದ ವ್ಯಾಪಿಸಿದ್ದು ವ್ಯಾಪಕವಾಗಿ ಹುಲ್ಲು ಬೆಳೆದಿದೆ ಇಲ್ಲಿ ಯಾರೋ ಕಿಡಿಗೇಡಿಗಳು ರಸ್ತೆಯ ಬದಿಯಲ್ಲಿ ಒಣಗಿರುವ ಹುಲ್ಲಿಗೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದಾರೆ.
ಇದರ ಸಮೀಪವೇ ಹಲವಾರು ಮನೆಗಳಿದ್ದು ತೋಟಗಳು ಇದೆ. ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದು ಎಲ್ಲರೂ ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಯಾರದೂ ತೋಟಗಳಿಗೆ ಬೆಂಕಿ ವ್ಯಾಪಿಸುವ ಮೊದಲು ಇದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಿಡಿಗೇಡಿಗಳು ರಾತ್ರಿಯ ವೇಳೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದು ಸ್ಥಳೀಯರು ಗಮನಿಸದೆ ಇರುತ್ತಿದ್ದರೆ ಭಾರೀ ದೊಡ್ಡ ಅನಾಹುತ ಸಂಭವಿಸುವ ಅಪಾಯವಿತ್ತು.
ಕೆಲ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿತ್ತು.
ಇದೀಗ ಕಿಡಿಗೇಡಿಗಳು ಬೆಂಕಿ ಹಚ್ವಿರುವುದು ಸ್ಪಷ್ಟವಾಗಿ ಕಂಡು ಬಂದಿದ್ದು ಇಂತಹ ಸಮಾಜ ವಿರೋಧೀ ವ್ಯಕ್ತಿಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜನ ಒತ್ತಾಯಿಸುತ್ತಿದ್ದಾರೆ.

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!