24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಎ.12 ರಂದು ರಾತ್ರಿ 11.30ಸುಮಾರಿಗೆ ಸಂಭವಿಸಿದೆ.
ಇಲ್ಲಿ ಸುಮಾರು ಹತ್ತು ಎಕ್ರೆ ಜಮೀನು ಬಂಡೆಕಲ್ಲುಗಳಿಂದ ವ್ಯಾಪಿಸಿದ್ದು ವ್ಯಾಪಕವಾಗಿ ಹುಲ್ಲು ಬೆಳೆದಿದೆ ಇಲ್ಲಿ ಯಾರೋ ಕಿಡಿಗೇಡಿಗಳು ರಸ್ತೆಯ ಬದಿಯಲ್ಲಿ ಒಣಗಿರುವ ಹುಲ್ಲಿಗೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದಾರೆ.
ಇದರ ಸಮೀಪವೇ ಹಲವಾರು ಮನೆಗಳಿದ್ದು ತೋಟಗಳು ಇದೆ. ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದು ಎಲ್ಲರೂ ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಯಾರದೂ ತೋಟಗಳಿಗೆ ಬೆಂಕಿ ವ್ಯಾಪಿಸುವ ಮೊದಲು ಇದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಿಡಿಗೇಡಿಗಳು ರಾತ್ರಿಯ ವೇಳೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದು ಸ್ಥಳೀಯರು ಗಮನಿಸದೆ ಇರುತ್ತಿದ್ದರೆ ಭಾರೀ ದೊಡ್ಡ ಅನಾಹುತ ಸಂಭವಿಸುವ ಅಪಾಯವಿತ್ತು.
ಕೆಲ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿತ್ತು.
ಇದೀಗ ಕಿಡಿಗೇಡಿಗಳು ಬೆಂಕಿ ಹಚ್ವಿರುವುದು ಸ್ಪಷ್ಟವಾಗಿ ಕಂಡು ಬಂದಿದ್ದು ಇಂತಹ ಸಮಾಜ ವಿರೋಧೀ ವ್ಯಕ್ತಿಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜನ ಒತ್ತಾಯಿಸುತ್ತಿದ್ದಾರೆ.

Related posts

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
error: Content is protected !!