22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಎ.12 ರಂದು ರಾತ್ರಿ 11.30ಸುಮಾರಿಗೆ ಸಂಭವಿಸಿದೆ.
ಇಲ್ಲಿ ಸುಮಾರು ಹತ್ತು ಎಕ್ರೆ ಜಮೀನು ಬಂಡೆಕಲ್ಲುಗಳಿಂದ ವ್ಯಾಪಿಸಿದ್ದು ವ್ಯಾಪಕವಾಗಿ ಹುಲ್ಲು ಬೆಳೆದಿದೆ ಇಲ್ಲಿ ಯಾರೋ ಕಿಡಿಗೇಡಿಗಳು ರಸ್ತೆಯ ಬದಿಯಲ್ಲಿ ಒಣಗಿರುವ ಹುಲ್ಲಿಗೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದಾರೆ.
ಇದರ ಸಮೀಪವೇ ಹಲವಾರು ಮನೆಗಳಿದ್ದು ತೋಟಗಳು ಇದೆ. ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದು ಎಲ್ಲರೂ ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಯಾರದೂ ತೋಟಗಳಿಗೆ ಬೆಂಕಿ ವ್ಯಾಪಿಸುವ ಮೊದಲು ಇದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಿಡಿಗೇಡಿಗಳು ರಾತ್ರಿಯ ವೇಳೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದು ಸ್ಥಳೀಯರು ಗಮನಿಸದೆ ಇರುತ್ತಿದ್ದರೆ ಭಾರೀ ದೊಡ್ಡ ಅನಾಹುತ ಸಂಭವಿಸುವ ಅಪಾಯವಿತ್ತು.
ಕೆಲ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿತ್ತು.
ಇದೀಗ ಕಿಡಿಗೇಡಿಗಳು ಬೆಂಕಿ ಹಚ್ವಿರುವುದು ಸ್ಪಷ್ಟವಾಗಿ ಕಂಡು ಬಂದಿದ್ದು ಇಂತಹ ಸಮಾಜ ವಿರೋಧೀ ವ್ಯಕ್ತಿಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜನ ಒತ್ತಾಯಿಸುತ್ತಿದ್ದಾರೆ.

Related posts

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!