26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

ಬೆಳ್ತಂಗಡಿ; ನೆರಿಯ ಗ್ರಾಮದ ದೇವಗಿರಿಯ ಪಾರಮಲೆ ಎಂಬಲ್ಲಿ ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಎ.12 ರಂದು ರಾತ್ರಿ 11.30ಸುಮಾರಿಗೆ ಸಂಭವಿಸಿದೆ.
ಇಲ್ಲಿ ಸುಮಾರು ಹತ್ತು ಎಕ್ರೆ ಜಮೀನು ಬಂಡೆಕಲ್ಲುಗಳಿಂದ ವ್ಯಾಪಿಸಿದ್ದು ವ್ಯಾಪಕವಾಗಿ ಹುಲ್ಲು ಬೆಳೆದಿದೆ ಇಲ್ಲಿ ಯಾರೋ ಕಿಡಿಗೇಡಿಗಳು ರಸ್ತೆಯ ಬದಿಯಲ್ಲಿ ಒಣಗಿರುವ ಹುಲ್ಲಿಗೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದಾರೆ.
ಇದರ ಸಮೀಪವೇ ಹಲವಾರು ಮನೆಗಳಿದ್ದು ತೋಟಗಳು ಇದೆ. ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಕಾರ್ಯಪ್ರವೃತ್ತರಾಗಿದ್ದು ಎಲ್ಲರೂ ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಯಾರದೂ ತೋಟಗಳಿಗೆ ಬೆಂಕಿ ವ್ಯಾಪಿಸುವ ಮೊದಲು ಇದನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಿಡಿಗೇಡಿಗಳು ರಾತ್ರಿಯ ವೇಳೆ ಬೆಂಕಿ ಹಚ್ಚುವ ಕಾರ್ಯ ಮಾಡಿದ್ದು ಸ್ಥಳೀಯರು ಗಮನಿಸದೆ ಇರುತ್ತಿದ್ದರೆ ಭಾರೀ ದೊಡ್ಡ ಅನಾಹುತ ಸಂಭವಿಸುವ ಅಪಾಯವಿತ್ತು.
ಕೆಲ ದಿನಗಳ ಹಿಂದೆ ಇದೇ ಪ್ರದೇಶದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿತ್ತು.
ಇದೀಗ ಕಿಡಿಗೇಡಿಗಳು ಬೆಂಕಿ ಹಚ್ವಿರುವುದು ಸ್ಪಷ್ಟವಾಗಿ ಕಂಡು ಬಂದಿದ್ದು ಇಂತಹ ಸಮಾಜ ವಿರೋಧೀ ವ್ಯಕ್ತಿಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜನ ಒತ್ತಾಯಿಸುತ್ತಿದ್ದಾರೆ.

Related posts

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya
error: Content is protected !!