24.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು.

ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ರಾಕ್ಷೆಘ್ನಹೋಮ, ಸಪ್ತಶುದ್ಧಿ, ಪ್ರಸಾದಶುದ್ಧಿ, ಪರಿವಾರ ದೇವತಾ ಸಹಿತ ಕಲಶಾದಿವಾಸ, ಪ್ರಧಾನ ಹೋಮ, ಪ್ರಾಕಾರ ಬಲಿ ಮಹಾಪೂಜೆ, ಪ್ರಸಾದ ವಿತರಣೆ,ಗಣಪತಿ ಹೋಮ, ಪರಿವಾರ ದೇವತಾ ಸಹಿತ ಶ್ರೀ ಮಹಾಲಿಂಗೇಶ್ವರ ದೇವರಿಗೆ 48 ಕಲಶಸಹಿತ ದೃಢಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಮಹಾರಂಗಪೂಜೆ, ಮಹೋತ್ಸವ, ಪ್ರಸಾದ ವಿತರಣೆ ನಡೆಯಿತು. ಹಾಗೂ ಸಂಪ್ರೋಕ್ಷಣೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್ ಪುರುಷೋತ್ತಮ ರಾವ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಟಿ ವಿಷ್ಣುಮೂರ್ತಿ ಭಟ್,ಕೆ.ಭಾಸ್ಕರ ಪೈ,ಅಣ್ಣು ಮೂಲ್ಯ, ಸತೀಶ್ ಕೇರಿಯಾರ್,ಕಾರ್ತಿಕ್ ಅಮೈ,ಪ್ರಶಾಂತ್ ಹೆಗ್ಡೆ,ಯಶೋಧ ಹೆಗ್ಡೆ,ಚಂಪಾ ಹಾಗೂ ಜೀರ್ಣೋದ್ಧಾರ ಸಮಿತಿ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya
error: Content is protected !!