23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು.

ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ರಾಕ್ಷೆಘ್ನಹೋಮ, ಸಪ್ತಶುದ್ಧಿ, ಪ್ರಸಾದಶುದ್ಧಿ, ಪರಿವಾರ ದೇವತಾ ಸಹಿತ ಕಲಶಾದಿವಾಸ, ಪ್ರಧಾನ ಹೋಮ, ಪ್ರಾಕಾರ ಬಲಿ ಮಹಾಪೂಜೆ, ಪ್ರಸಾದ ವಿತರಣೆ,ಗಣಪತಿ ಹೋಮ, ಪರಿವಾರ ದೇವತಾ ಸಹಿತ ಶ್ರೀ ಮಹಾಲಿಂಗೇಶ್ವರ ದೇವರಿಗೆ 48 ಕಲಶಸಹಿತ ದೃಢಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಮಹಾರಂಗಪೂಜೆ, ಮಹೋತ್ಸವ, ಪ್ರಸಾದ ವಿತರಣೆ ನಡೆಯಿತು. ಹಾಗೂ ಸಂಪ್ರೋಕ್ಷಣೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್ ಪುರುಷೋತ್ತಮ ರಾವ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಟಿ ವಿಷ್ಣುಮೂರ್ತಿ ಭಟ್,ಕೆ.ಭಾಸ್ಕರ ಪೈ,ಅಣ್ಣು ಮೂಲ್ಯ, ಸತೀಶ್ ಕೇರಿಯಾರ್,ಕಾರ್ತಿಕ್ ಅಮೈ,ಪ್ರಶಾಂತ್ ಹೆಗ್ಡೆ,ಯಶೋಧ ಹೆಗ್ಡೆ,ಚಂಪಾ ಹಾಗೂ ಜೀರ್ಣೋದ್ಧಾರ ಸಮಿತಿ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!