23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು.

ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ರಾಕ್ಷೆಘ್ನಹೋಮ, ಸಪ್ತಶುದ್ಧಿ, ಪ್ರಸಾದಶುದ್ಧಿ, ಪರಿವಾರ ದೇವತಾ ಸಹಿತ ಕಲಶಾದಿವಾಸ, ಪ್ರಧಾನ ಹೋಮ, ಪ್ರಾಕಾರ ಬಲಿ ಮಹಾಪೂಜೆ, ಪ್ರಸಾದ ವಿತರಣೆ,ಗಣಪತಿ ಹೋಮ, ಪರಿವಾರ ದೇವತಾ ಸಹಿತ ಶ್ರೀ ಮಹಾಲಿಂಗೇಶ್ವರ ದೇವರಿಗೆ 48 ಕಲಶಸಹಿತ ದೃಢಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ಮಹಾರಂಗಪೂಜೆ, ಮಹೋತ್ಸವ, ಪ್ರಸಾದ ವಿತರಣೆ ನಡೆಯಿತು. ಹಾಗೂ ಸಂಪ್ರೋಕ್ಷಣೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್ ಪುರುಷೋತ್ತಮ ರಾವ್,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಟಿ ವಿಷ್ಣುಮೂರ್ತಿ ಭಟ್,ಕೆ.ಭಾಸ್ಕರ ಪೈ,ಅಣ್ಣು ಮೂಲ್ಯ, ಸತೀಶ್ ಕೇರಿಯಾರ್,ಕಾರ್ತಿಕ್ ಅಮೈ,ಪ್ರಶಾಂತ್ ಹೆಗ್ಡೆ,ಯಶೋಧ ಹೆಗ್ಡೆ,ಚಂಪಾ ಹಾಗೂ ಜೀರ್ಣೋದ್ಧಾರ ಸಮಿತಿ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya
error: Content is protected !!