April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

ಬಳಂಜ: ತುಳುನಾಡಿನ ಧಾರ್ಮಿಕ ಅಚರಣೆಗಳೊಂದಾದ ಪುರ್ಸರ ರಾಶಿ ಪೂಜೆಯು ಬಳಂಜ ದೇವಸ್ಥಾನದ ಬಳಿ ಅದ್ದೂರಿಯಿಂದ ಮತ್ತು ಅರ್ಥಪೂರ್ಣವಾಗಿ ನಡೆಯಿತು.
ಬಳಂಜ ಜೋಗಿ ಪುರುಷ ಭಕ್ತವೃಂದದ ನೇತೃತ್ವದಲ್ಲಿ ಗ್ರಾಮದ ಮಕ್ಕಳು, ಯುವಕರು ಹಿರಿಯರು ಸುಗ್ಗಿ ಹುಣ್ಣಿಮೆಯ ಸಂಧರ್ಭದಲ್ಲಿ 5 ದಿನಗಳ ಕಾಲ ವಿವಿಧ ವೇಷಭೂಷಣಗಳನ್ನು ತೊಟ್ಟು ಗ್ರಾಮದ ಮನೆಮನೆಗೆ ಸಂಚರಿಸಿದ್ದರು. ಬಳಿಕ ತಾವು ಸಂಗ್ರಹಿಸಿದ ಕಾಣಿಕೆಯನ್ನು ಕದ್ರಿ ಮಂಜುನಾಥೇಶ್ವರನ ಸನ್ನಿಧಿಗೆ ಅರ್ಪಿಸಿದರು. ಏ.13 ರಂದು ರಾತ್ರಿ ಅದ್ದೂರಿಯಾಗಿ ಪುರುಷರ ರಾಶಿ ಪೂಜೆಯನ್ನು ನಡೆಸಿ ಈ ವರ್ಷದ ಪುರುಷ ಕಟ್ಟುವ ಆಚರಣೆಯನ್ನು ಮುಕ್ತಾಯಗೊಳಿಸಿದರು.


ರಾಶಿ ಪೂಜೆಯ ಹಿನ್ನೆಲೆ ಬಳಂಜದ ಜೋಗಿ ಪುರುಷ ಭಕ್ತವೃಂದದ ವತಿಯಿಂದ ಬಳಂಜ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ದೇವಳದ ಆವರಣದಲ್ಲಿ ಕದ್ರಿ ಮಂಜುನಾಥೇಶ್ವರ ಸ್ವಾಮಿಯನ್ನು ಇಟ್ಟು ಅದರ ಎದುರು ಅವಲಕ್ಕಿಯ ದೊಡ್ಡ ರಾಶಿಯನ್ನು ಹಾಕಿ, ಪೂಜೆ ನಡೆಸಲಾಯಿತು.
ಇದೇ ವೇಳೆ ದೇವರ ಬಲಿ, ದೈವದ ದರ್ಶನ, ವಿವಿಧ ವೇಷಭೂಷಣಗಳ ಪ್ರದರ್ಶನ ನಡೆಯಿತು.

ಪೂಜೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಕ್ಕಳು – ಮಹಿಳೆಯರು ಭಾಗವಹಿಸಿದ್ದರು. ಎಲ್ಲರಿಗೂ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya
error: Content is protected !!