27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

ಬಳಂಜ: ತುಳುನಾಡಿನ ಧಾರ್ಮಿಕ ಅಚರಣೆಗಳೊಂದಾದ ಪುರ್ಸರ ರಾಶಿ ಪೂಜೆಯು ಬಳಂಜ ದೇವಸ್ಥಾನದ ಬಳಿ ಅದ್ದೂರಿಯಿಂದ ಮತ್ತು ಅರ್ಥಪೂರ್ಣವಾಗಿ ನಡೆಯಿತು.
ಬಳಂಜ ಜೋಗಿ ಪುರುಷ ಭಕ್ತವೃಂದದ ನೇತೃತ್ವದಲ್ಲಿ ಗ್ರಾಮದ ಮಕ್ಕಳು, ಯುವಕರು ಹಿರಿಯರು ಸುಗ್ಗಿ ಹುಣ್ಣಿಮೆಯ ಸಂಧರ್ಭದಲ್ಲಿ 5 ದಿನಗಳ ಕಾಲ ವಿವಿಧ ವೇಷಭೂಷಣಗಳನ್ನು ತೊಟ್ಟು ಗ್ರಾಮದ ಮನೆಮನೆಗೆ ಸಂಚರಿಸಿದ್ದರು. ಬಳಿಕ ತಾವು ಸಂಗ್ರಹಿಸಿದ ಕಾಣಿಕೆಯನ್ನು ಕದ್ರಿ ಮಂಜುನಾಥೇಶ್ವರನ ಸನ್ನಿಧಿಗೆ ಅರ್ಪಿಸಿದರು. ಏ.13 ರಂದು ರಾತ್ರಿ ಅದ್ದೂರಿಯಾಗಿ ಪುರುಷರ ರಾಶಿ ಪೂಜೆಯನ್ನು ನಡೆಸಿ ಈ ವರ್ಷದ ಪುರುಷ ಕಟ್ಟುವ ಆಚರಣೆಯನ್ನು ಮುಕ್ತಾಯಗೊಳಿಸಿದರು.


ರಾಶಿ ಪೂಜೆಯ ಹಿನ್ನೆಲೆ ಬಳಂಜದ ಜೋಗಿ ಪುರುಷ ಭಕ್ತವೃಂದದ ವತಿಯಿಂದ ಬಳಂಜ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ದೇವಳದ ಆವರಣದಲ್ಲಿ ಕದ್ರಿ ಮಂಜುನಾಥೇಶ್ವರ ಸ್ವಾಮಿಯನ್ನು ಇಟ್ಟು ಅದರ ಎದುರು ಅವಲಕ್ಕಿಯ ದೊಡ್ಡ ರಾಶಿಯನ್ನು ಹಾಕಿ, ಪೂಜೆ ನಡೆಸಲಾಯಿತು.
ಇದೇ ವೇಳೆ ದೇವರ ಬಲಿ, ದೈವದ ದರ್ಶನ, ವಿವಿಧ ವೇಷಭೂಷಣಗಳ ಪ್ರದರ್ಶನ ನಡೆಯಿತು.

ಪೂಜೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಕ್ಕಳು – ಮಹಿಳೆಯರು ಭಾಗವಹಿಸಿದ್ದರು. ಎಲ್ಲರಿಗೂ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

Related posts

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya
error: Content is protected !!