September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

ಬಳಂಜ: ತುಳುನಾಡಿನ ಧಾರ್ಮಿಕ ಅಚರಣೆಗಳೊಂದಾದ ಪುರ್ಸರ ರಾಶಿ ಪೂಜೆಯು ಬಳಂಜ ದೇವಸ್ಥಾನದ ಬಳಿ ಅದ್ದೂರಿಯಿಂದ ಮತ್ತು ಅರ್ಥಪೂರ್ಣವಾಗಿ ನಡೆಯಿತು.
ಬಳಂಜ ಜೋಗಿ ಪುರುಷ ಭಕ್ತವೃಂದದ ನೇತೃತ್ವದಲ್ಲಿ ಗ್ರಾಮದ ಮಕ್ಕಳು, ಯುವಕರು ಹಿರಿಯರು ಸುಗ್ಗಿ ಹುಣ್ಣಿಮೆಯ ಸಂಧರ್ಭದಲ್ಲಿ 5 ದಿನಗಳ ಕಾಲ ವಿವಿಧ ವೇಷಭೂಷಣಗಳನ್ನು ತೊಟ್ಟು ಗ್ರಾಮದ ಮನೆಮನೆಗೆ ಸಂಚರಿಸಿದ್ದರು. ಬಳಿಕ ತಾವು ಸಂಗ್ರಹಿಸಿದ ಕಾಣಿಕೆಯನ್ನು ಕದ್ರಿ ಮಂಜುನಾಥೇಶ್ವರನ ಸನ್ನಿಧಿಗೆ ಅರ್ಪಿಸಿದರು. ಏ.13 ರಂದು ರಾತ್ರಿ ಅದ್ದೂರಿಯಾಗಿ ಪುರುಷರ ರಾಶಿ ಪೂಜೆಯನ್ನು ನಡೆಸಿ ಈ ವರ್ಷದ ಪುರುಷ ಕಟ್ಟುವ ಆಚರಣೆಯನ್ನು ಮುಕ್ತಾಯಗೊಳಿಸಿದರು.


ರಾಶಿ ಪೂಜೆಯ ಹಿನ್ನೆಲೆ ಬಳಂಜದ ಜೋಗಿ ಪುರುಷ ಭಕ್ತವೃಂದದ ವತಿಯಿಂದ ಬಳಂಜ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ದೇವಳದ ಆವರಣದಲ್ಲಿ ಕದ್ರಿ ಮಂಜುನಾಥೇಶ್ವರ ಸ್ವಾಮಿಯನ್ನು ಇಟ್ಟು ಅದರ ಎದುರು ಅವಲಕ್ಕಿಯ ದೊಡ್ಡ ರಾಶಿಯನ್ನು ಹಾಕಿ, ಪೂಜೆ ನಡೆಸಲಾಯಿತು.
ಇದೇ ವೇಳೆ ದೇವರ ಬಲಿ, ದೈವದ ದರ್ಶನ, ವಿವಿಧ ವೇಷಭೂಷಣಗಳ ಪ್ರದರ್ಶನ ನಡೆಯಿತು.

ಪೂಜೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಕ್ಕಳು – ಮಹಿಳೆಯರು ಭಾಗವಹಿಸಿದ್ದರು. ಎಲ್ಲರಿಗೂ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

Related posts

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya
error: Content is protected !!