25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

ಬಳಂಜ: ತುಳುನಾಡಿನ ಧಾರ್ಮಿಕ ಅಚರಣೆಗಳೊಂದಾದ ಪುರ್ಸರ ರಾಶಿ ಪೂಜೆಯು ಬಳಂಜ ದೇವಸ್ಥಾನದ ಬಳಿ ಅದ್ದೂರಿಯಿಂದ ಮತ್ತು ಅರ್ಥಪೂರ್ಣವಾಗಿ ನಡೆಯಿತು.
ಬಳಂಜ ಜೋಗಿ ಪುರುಷ ಭಕ್ತವೃಂದದ ನೇತೃತ್ವದಲ್ಲಿ ಗ್ರಾಮದ ಮಕ್ಕಳು, ಯುವಕರು ಹಿರಿಯರು ಸುಗ್ಗಿ ಹುಣ್ಣಿಮೆಯ ಸಂಧರ್ಭದಲ್ಲಿ 5 ದಿನಗಳ ಕಾಲ ವಿವಿಧ ವೇಷಭೂಷಣಗಳನ್ನು ತೊಟ್ಟು ಗ್ರಾಮದ ಮನೆಮನೆಗೆ ಸಂಚರಿಸಿದ್ದರು. ಬಳಿಕ ತಾವು ಸಂಗ್ರಹಿಸಿದ ಕಾಣಿಕೆಯನ್ನು ಕದ್ರಿ ಮಂಜುನಾಥೇಶ್ವರನ ಸನ್ನಿಧಿಗೆ ಅರ್ಪಿಸಿದರು. ಏ.13 ರಂದು ರಾತ್ರಿ ಅದ್ದೂರಿಯಾಗಿ ಪುರುಷರ ರಾಶಿ ಪೂಜೆಯನ್ನು ನಡೆಸಿ ಈ ವರ್ಷದ ಪುರುಷ ಕಟ್ಟುವ ಆಚರಣೆಯನ್ನು ಮುಕ್ತಾಯಗೊಳಿಸಿದರು.


ರಾಶಿ ಪೂಜೆಯ ಹಿನ್ನೆಲೆ ಬಳಂಜದ ಜೋಗಿ ಪುರುಷ ಭಕ್ತವೃಂದದ ವತಿಯಿಂದ ಬಳಂಜ ಪಂಚಲಿಂಗೇಶ್ವರ ಮತ್ತು ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ದೇವಳದ ಆವರಣದಲ್ಲಿ ಕದ್ರಿ ಮಂಜುನಾಥೇಶ್ವರ ಸ್ವಾಮಿಯನ್ನು ಇಟ್ಟು ಅದರ ಎದುರು ಅವಲಕ್ಕಿಯ ದೊಡ್ಡ ರಾಶಿಯನ್ನು ಹಾಕಿ, ಪೂಜೆ ನಡೆಸಲಾಯಿತು.
ಇದೇ ವೇಳೆ ದೇವರ ಬಲಿ, ದೈವದ ದರ್ಶನ, ವಿವಿಧ ವೇಷಭೂಷಣಗಳ ಪ್ರದರ್ಶನ ನಡೆಯಿತು.

ಪೂಜೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಕ್ಕಳು – ಮಹಿಳೆಯರು ಭಾಗವಹಿಸಿದ್ದರು. ಎಲ್ಲರಿಗೂ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

Related posts

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!