25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜಾ ಅವರು ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ ಕೈಗೊಂಡಿದ್ದು ಬಿಜೆಪಿ ಮಂಡಲ ಪದಾಧಿಕಾರಿಗಳೊಂದಿಗೆ ವಿಧಾನಸಭಾ ಚುನಾವಣೆ-2023ರ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ.

ಎ.12.ರಿಂದ ಎ 14ವರೆಗೆ 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ನಾರಾವಿ ಶ್ರೀಸೂರ್ಯನಾರಾಯಣ ದೇವರಿಗೆ ಕೈಮುಗಿದು, ತೀರ್ಥ ಪ್ರಸಾದ ಸ್ವೀಕರಿಸಿ, ನಾರಾವಿ ಶಕ್ತಿಕೇಂದ್ರದಿಂದಲೇ ಪ್ರವಾಸ ಆರಂಭಿಸಿ ಕುತ್ಲೂರು, ಸುಲ್ಕೇರಿ, ಕೊಕ್ರಾಡಿ, ಅಂಡಿಂಜೆ, ಸಾವ್ಯ ಪೆರಾಡಿ, ಮರೋಡಿ, ಕಾಶಿಪಟ್ಟ ಬಡಕೋಡಿ, ಹೊಸಂಗಡಿ, ಆರಂಬೋಡಿ, ವೇಣೂರು, ಕರಿಮಣೇಲು ,ಮೂಡುಕೋಡಿ, ಕುಕ್ಕೇಡಿ, ನಿಟ್ಟಡೆ, ಗರ್ಡಾಡಿ,ಪಿಲ್ಯ, ಕುದ್ಯಾಡಿ, ನಾವರ, ಪಡಂಗಡಿ, ನಾಲ್ಕೂರು, ಬಜಿರೆ, ತೆಂಕಕಾರಂದೂರು, ಬಡಗಕಾರಂದೂರು ಶಕ್ತಿಕೇಂದ್ರಗಳ ಸಭೆ ನಡೆಸಿದರು.

ಎ.13 ರಂದು ಶಿಬಾಜೆ ಅರಸಿನಮಕ್ಕಿ,ಶಿಶಿಲ, ರೆಖ್ಯಾ ಗುಂಡೂರಿ, ಪಟ್ರಮೆ, ಕೊಕ್ಕಡ, ಕಳೆಂಜ, ನಿಡ್ಲೆ ಪುದುವೆಟ್ಟು, ನೆರಿಯ, ಚಿಬಿದ್ರೆ ತೊಟತ್ತಾಡಿ, ಚಾರ್ಮಾಡಿ, ಮುಂಡಾಜೆ ಉಜಿರೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ,ಇಂದಬೆಟ್ಟು, ನಾವೂರು ಶಕ್ತಿ ಕೇಂದ್ರಗಳ ಸಭೆ ನಡೆಸಿದರು.

ಎ 14 ರಂದು ಸೋಣಂದೂರು, ಮಾಲಾಡಿ, ಕುಕ್ಕಳ, ನಡ, ಧರ್ಮಸ್ಥಳ, ನಡ, ಕನ್ಯಾಡಿ, ಲಾಯಿಲ, ಕೊಯ್ಯೂರು, ಬೆಳಾಲು, ಪಾರೆಂಕಿ, ಮಚ್ಚಿನ ತಣ್ಣೀರುಪಂಥ, ಪುತ್ತಿಲ,ಬಾರ್ಯ ಶಕ್ತಿಕೇಂದ್ರಗಳ ಸಭೆ ನಡೆಸಿದರು.ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ಸಂಘಟನಾತ್ಮಕ ಪ್ರವಾಸ ಕೈಗೊಂಡು ಪಕ್ಷವನ್ನು ಅತ್ಯಂತ ಹೆಚ್ಚಿನ ಮತಗ ಅಂತರದಿಂದ ಗೆಲ್ಲಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಶಕ್ತಿ ಕೇಂದ್ರಗಳ ಪ್ರವಾಸದಾದ್ಯಂತ ಅನ್ಯಪಕ್ಷಗಳ ಅನೇಕ ಕಾರ್ಯಕರ್ತರು, ನಾಯಕರು ಶಾಸಕ ಹರೀಶ್ ಪೂಂಜರ ಅವರು ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಬಿಜೆಪಿ ಪಕ್ಷದ ತತ್ವಸಿದ್ಧಾಂತಗಳನ್ನು ಒಪ್ಪಿ ಬಿಜೆಪಿಗೆ ಸೇರ್ಪಡೆಗೊಂಡರು. ಬಡಕೋಡಿ ಗ್ರಾಮದ ರವಿನಾಯ್ಕ ಮೂಡುಕೋಡಿ ಗ್ರಾಮದ ಜಯರಾಮ್, ಸುಧಾಕರ್ ಅವರನ್ನು ಹರೀಶ್ ಪೂಂಜಾ ಅವರು ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅವರೊಂದಿಗೆ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಶಕ್ತಿ ಕೇಂದ್ರಗಳ ಸಭೆಯಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್‌ ಕೋಟ್ಯಾನ್, ಬಿಜೆಪಿ ದಕ ಜಿಲ್ಲಾ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಕೊರಗಪ್ಪ ನಾಯ್ಕ ಜಿಲ್ಲಾ ಎಸ್.ಟಿ.ಮೋರ್ಚಾ ಅಧ್ಯಕ್ಷರಾದ ಚೆನ್ನಕೇಶವ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾಅಧ್ಯಕ್ಷರಾದ ಜೋಯಲ್‌ ಮೆಂಡೋನ್ಸ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್‌ ರಾವ್, ಗಣೇಶ್‌ ನಾವೂರು, ಉಪಾಧ್ಯಕ್ಷರಾದ ಸೀತಾರಾಮ್‌ ಬೆಳಾಲು, ಕೊರಗಪ್ಪಗೌಡ ಹಾಗೂ ಪಕ್ಷದ ಮಹಾಶಕ್ತಿಕೇಂದ್ರ, ಶಕ್ತಿ ಕೇಂದ್ರ ಬೂತ್‌ ಮಟ್ಟದ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya
error: Content is protected !!