22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಂಕಕಾರಂದೂರು ಇಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ, ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳ ಎ.ಬಿ ಒಕ್ಕೂಟ ಹಾಗೂ ಸ್ಥಳೀಯ ಸಂಘ, ಸಂಸ್ಥೆ ಸಹಕಾರದಲ್ಲಿ ರಾಮ್ ದಾಸ್ ಭಟ್ ಮುಂಡೂರು ಇವರ ಪೌರೋಹಿತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಜರಗಿತು.

ಶ್ರೀ ವಿಷ್ಣು ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೃಷ್ಣ ಸಂಪಿಗೆತ್ತಾಯ, ಪ್ರಧಾನ ಅರ್ಚಕ ಪ್ರಭಾಕರ ಉಪಾಧ್ಯಾಯ, ವಿಷ್ಣು ಸಂಪಿಗೆತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ, ಭಜನಾ ಮಂಡಳಿಯ ಅಧ್ಯಕ್ಷ ಯೋಗೀಶ್ ಸಪಲ್ಯ, ಕಾರ್ಯದರ್ಶಿ ವಿಶ್ವಾಸ್ ಕಳಿಕ್ಕ, ಗೌರವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಸಮಿತಿಯ ಪದಾಧಿಕಾರಿಗಳು ಹಾಗೂ ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

ಸುಮಾರು ಅರುವತ್ತು ಮಂದಿ ವೃತಾಚಾರಿಗಳು ಸೇವೆಯಲ್ಲಿ ಪಾಲ್ಗೊಂಡಿದ್ದರು.

Related posts

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya
error: Content is protected !!