24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ ಉಜಿರೆ ಇದರ ವತಿಯಿಂದ
33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವು ಎ.14 ರಂದು ಉಜಿರೆ ಶ್ರೀ ಸಿದ್ಧವನ ಗುರುಕುಲದಲ್ಲಿ ಜರುಗಿತು.


ಶ್ರೀ ಕ್ಷೇತ್ರ ಧರ್ಮಸ್ಥಳ‌ದ ಮಾತೃಶ್ರೀ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ದೀಪ ಪ್ರಜ್ವಲನೆ ನೆರವೇರಿಸಿದರು.
ಅಧ್ಯಕ್ಷತೆಯನ್ನು ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿ ಶ್ರೀ ಧ. ಮಂ. ಎಜ್ಯುಕೇಶನಲ್ ಸೊಸೈಟಿ , ಉಜಿರೆ ನಿವೃತ್ತ ನೌಕರರನ್ನು ಸನ್ಮಾನಿಸಿದರು.

ಹೇಮಾವತಿ ಹೆಗ್ಗಡೆ ಹಾಗೂ ಡಿ ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಶ್ರೀ ಧ. ಮಂ. ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾ‌ರ್ ಹಾಗೂ ಶ್ರೀ ಧ, ಮಂ. ಎಜ್ಯುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್‌. , ಸುಪ್ರೀಯ ಹರ್ಷೇಂದ್ರ ಕುಮಾರ್, ಪೂರಣ್ ವಮ೯ ಉಪಸ್ಥಿತರಿದ್ದರು.

ಬಳಿಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ಮೌಲ್ಯಾಧಾರಿತ ಶಿಕ್ಷಣ ಮತ್ತು ಶೈಕ್ಷಣಿಕ ನಾಯಕತ್ವ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಭಟ್ , ಮತ್ತು ಕೃಷ್ಣ ಮೋಹನ್ ಪುತ್ತೂರು ಮಾಹಿತಿ ನೀಡಿದರು.

ಶ್ರೀಮತಿ ಸುಮಾ ಶ್ರೀ ನಾಥ್ ಪ್ರಾರ್ಥಿಸಿ , ರಾಮಕೃಷ್ಣ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಸೋಮಶೇಖರ್ ಶೆಟ್ಟಿ ಸನ್ಮಾನಿತರ ವಿವರ ನೀಡಿದರು. ಧರ್ಮಸ್ಥಳ ಸಿಬಿಎಸ್ಇ ಸ್ಕೂಲ್ ಪ್ರಾಂಶುಪಾಲರು ಮನಮೋಹನ್ ನಾಯಕ್ ವಂದಿಸಿದರು.

Related posts

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಉಜಿರೆ ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!