23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

ಪುಂಜಾಲಕಟ್ಟೆ : ಪಂಜಿಕಲ್ಲು ಗ್ರಾಮದ ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ ಮಧ್ಯಯಕ್ಷಕೂಟದ ವತಿಯಿಂದ, ಕಜೆಬೈಲು ಶ್ರೀ ಪಿಲಿಚಾಮುಂಡಿ ಫ್ರೆಂಡ್ಸ್ ಸಹಕಾರದಲ್ಲಿ ನಡೆದ ತಾಳಮದ್ದಳೆ ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಬುಡೋಳಿ‌ ಉದ್ಘಾಟಿಸಿದರು.

ನಂತರ ಮಾತನಾಡಿ, ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ, ಪೌರಾಣಿಕ ಪ್ರಜ್ಞೆ ಮೂಡಿಸುವ, ಸಮಾಜಮುಖಿ ಚಿಂತನೆ ನೀಡುವ ಯಕ್ಷಗಾನಕ್ಕೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ಯಕ್ಷಗಾನವನ್ನು ಬೆಳೆಸುವಲ್ಲಿ ನಿರಂತರ ಕಾರ್ಯಕ್ರಮ ನೀಡುವ ಮಧ್ಯ ಯಕ್ಷ ಕೂಟದ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಬಂಟ್ವಾಳ ತುಳು ಕೂಟ ಅಧ್ಯಕ್ಷ ಸುದರ್ಶನ್ ಜೈನ್‌ ಅಧ್ಯಕ್ಷತೆ ವಹಿಸಿದ್ದರು. ದೈವ ಪಾತ್ರಿ ಪದ್ಮರಾಜ ಜೈನ್ ಪಡುಕೋಣಾಜೆ, ಕಾರಿಂಜ ಯಕ್ಷವಾಸ್ಯಮ್ ಇದರ ಸಂಚಾಲಕಿ ಸಾಯಿಸುಮಾ ನಾವಡ, ಕಜೆಬೈಲು ನೇಮ ಸಮಿತಿ ಪ್ರಮುಖರಾದ ಸಂಜೀವ ಶೆಟ್ಟಿ ಪಂಜಿಕಲ್ಲು ಹಾ.ಉ.ಸಂಘದ ಕಾರ್ಯದರ್ಶಿ ದೇವಪ್ಪ ಕುಲಾಲ್‌, ಕಜೆಬೈಲು ಶ್ರೀ ಪಿಲಿಚಾಮುಂಡಿ ಫ್ರೆಂಡ್ಸ್ ಅಧ್ಯಕ್ಷ ದೀಪಕ್ ಪೂಜಾರಿ, ಹಿರಿಯ ಅರ್ಥಧಾರಿ ತಿಮ್ಮಪ್ಪ ಶೆಟ್ಟಿ ಪಾತಿಲ, ಯಕ್ಷ ಕೂಟ ಸಮಿತಿ ಪದಾಧಿಕಾರಿಗಳಾದ ಸುಜಾತಾ ಶೆಟ್ಟಿ ಯುವರಾಜ ಶೆಟ್ಟಿ ಶುಭಾಶಯ್ ಶೆಟ್ಟಿಕುಸುಮಾ ರಘುರಾಮ
ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಯಕ್ಷ ಕೂಟ ಅಧ್ಯಕ್ಷ ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ದೇವಪ್ಪ ಕುಲಾಲ್ ವಂದಿಸಿದರು.

ಪಿಲಿಚಾಮುಂಡಿ ದೈವ: ಈ ಸಂದರ್ಭದಲ್ಲಿ ದೈವಕ್ಕೆ ಹಗಲು ನೇಮ ಹಾಗೂ ರಾತ್ರಿ ಮಂತ್ರದೇವತೆಗೆ ಕೋಲ ಬಲಿ ಸೇವೆ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್‌ ನ್ಯಾಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ ಮತ್ತಿತರ ಗಣ್ಯರು ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು. ಪ್ರಮುಖರಾದ ಸಂಜೀವ ಶೆಟ್ಟಿ, ಸುದರ್ಶನ್ ಜೈನ್, ದೇವಪ್ಪ ಕುಲಾಲ್‌, ಭಾಸ್ಕರ ಶೆಟ್ಟಿ
ಮತ್ತಿತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya
error: Content is protected !!