32.6 C
ಪುತ್ತೂರು, ಬೆಳ್ತಂಗಡಿ
June 6, 2025
ತಾಲೂಕು ಸುದ್ದಿ

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ


— ಧರ್ಮಸ್ಥಳ -ಮಂಗಳೂರು ವಾಹನಗಳು ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್, ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಸೂಚನೆ.
—- ಮಂಗಳೂರು-ಧರ್ಮಸ್ಥಳ ವಾಹನಗಳು ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್, ಆದ್ರುಪೆರಾಲ್ ಮುಖಾಂತರ ಸಂಚರಿಸಲು ಸೂಚನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಎ.೧೭ರಂದು ಬಿಜೆಪಿ, ಕಾಂಗ್ರೆಸ್ ಹಾಗೂ ಎಸ್.ಡಿ.ಪಿ.ಐ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರಕ್ಕೆ ಆಡಚಣೆಯಾಗುವ ಹಿನ್ನಲೆಯಲ್ಲಿ ಬೆಳ್ತಂಗಡಿ ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆಯನ್ನು ಸೂಚಿಸಿ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಅದೇಶ ನೀಡಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕಾರ್ಯಕರ್ತರ ಜೊತೆ ಒಂದೇ ದಿನ ನಾಮಪತ್ರ ಸಲ್ಲಿಸಲಿರುವುದರಿಂದ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದ್ದು, ಬದಲಿ ವ್ಯವಸ್ಥೆ ಮಾಡುವಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರು ತಾಲೂಕು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಬೆಳ್ತಂಗಡಿ ತಹಶೀಲ್ದಾರ್ ದ.ಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದು, ತಹಶೀಲ್ದಾರ್ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ದ.ಕ ಜಿಲ್ಲಾಧಿಕಾರಿಗಳು ಈ ಆದೇಶ ಮಾಡಿದ್ದಾರೆ. ಎ.17ರಂದು ಬೆಳ್ತಂಗಡಿ ಪೇಟೆಯನ್ನು ಹಾದು ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಸೂಚಿಸಲಾಗಿದೆ. ಹಾಗೆಯೇ iಡಲು ದ.ಕ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Related posts

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
error: Content is protected !!