22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ; ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿಯವರು ಶನಿವಾರ ಬೆಳ್ತಂಗಡಿ ತಾಕೂಕಿಗೆ ಆಗಮಿಸಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಲ್ಲಿ ವಿಶೇಷ ಪೂಜೆಯಲ್ಲಿ‌‌ ಭಾಗಿಯಾದರು.

ಸಂಜೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ವೇಳೆ ಕ್ಷೇತ್ರದ ಪರವಾಗಿ ಡಿ‌ ಹರ್ಷೇಂದ್ರ ಕುಮಾರ್ ಬರಮಾಡಿಕೊಂಡರು.

ಬಳಿಕ ನಾಳ‌ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ದೇವಿಗೆ ವಿಶೇಷ ದುರ್ಗಾ ಪೂಜೆ ಸಲ್ಲಿಸಿದರು.
ನಾಡಿಗೆ ಸುಬೀಕ್ಷೆ ಹಾಗೂ ವಿಶೇಷ ಸಂಕಲ್ಪ ನಿಮಿತ್ತ ದೇವಳದಲ್ಲಿ ಮೂರು‌ ದಿನಗಳಿಂದ, ಪ್ರಧಾನ
ಅರ್ಚಕರಾದ ವೇದಮೂರ್ತಿ‌ ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ನಡೆದ ಅರ್ಚೆನೆ ಹಾಗೂ ವಿಧಿ ವಿಧಾನಗಳ ಜೊತೆಗೆ ಧಾರ್ಮಿಕ ಹೋಮ ಹವನ ನಡೆದು ಅದರ ಪೂರ್ಣಾಹುತಿಯಲ್ಲಿ ಅವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು
ಬೊಮ್ಮನಹಳ್ಳಿ ಕ್ಷೇತ್ರದ ನಾರಾಯಣ ರಾಜು,‌ ವಿಧಾನ‌ ಪರಿಷತ್ ಶಾಸಕ ಎಸ್.ಎಲ್ ಭೋಜೇ ಗೌಡ, ರಾಜ್ಯ ವಕ್ತಾರ ಹಾಗೂ ಮಾದ್ಯಮ ಸಂಚಾಲಕ ಎಂ.ಬಿ ಸದಾಶಿವ,‌
ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್, ತಾಲೂಕು ನಿಯೋಜಿತ ಅದ್ಯಕ್ಷ ಶ್ರೀನಿವಾಸ ಗೌಡ ಪಟ್ರಮೆ, ಪ್ರಮುಖರಾದ ಹೆಚ್.ಎನ್ ನಾಗರಾಜ್, ರಾಮ ಆಚಾರಿ, ಶಾಹಿದ್ ಪಾದೆ ಉಪಸ್ಥಿತರಿದ್ದರು.ದೇವಳದ ಕಡೆಯಿಂದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯರಾದ ವಸಂತ ಮಜಲು,‌ ಜನಾರ್ದನ ಪೂಜಾರಿ, ರಾಜೇಶ್ ಶೆಟ್ಟಿ,‌ ಉಮೇಶ್ ಕೇಲ್ದಡ್ಕ, ಅಂಬಾ ಬಿ ಆಳ್ವಾ, ಹಾಗೂ ಇತರರು ಭಾಗಿಯಾಗಿದ್ದರು.

ತಾಲೂಕು ಚುನಾವಣಾಧಿಕಾರಿ ಯೋಗೀಶ್, ನಗರ ಪಂಚಾಯತ್ ‌ಮುಖ್ಯಾಧಿಕಾರಿ ನಟರಾಜ್, ಪರಮೇಶ್ ಹಾಜರಿದ್ದರು.

ಸುಸ್ಥಿರ ಆಡಳಿತ: ಕುಮಾರ ಸ್ವಾಮಿ

ಮುಂದಿನ ದಿನಗಳಲ್ಲಿ ದುರ್ಗಾಪರಮೇಶ್ವರೀ ತಾಯಿಯ ಆಶೀರ್ವಾದದಿಂದ ‌ರಾಜ್ಯದಲ್ಲಿ ಸುಸ್ಥಿರ ಆಡಳಿತ ಬರುವಂತೆ ಹಾಗೂ ತಾಯಿಯ ಅನುಗ್ರಹದಿಂದ‌ ನಾಡಿನ‌ ಜನತೆಗೆ ಒಳಿತಾಗಲಿ ಎಂದು ವಿಶೇಷ ಹೋಮ ಹವನ ಮಾಡಿದ್ದೇನೆ. ಪಕ್ಷದ ಮತ್ತು ಎಲ್ಲಾ ವಿಚಾರಗಳ ಬಗ್ಹೆಯೂ ಸಂಕಲ್ಪ ಮಾಡಿದ್ದೇನೆ.

  • ಹೆಚ್.ಡಿ‌ ಕುಮಾರಸ್ವಾಮಿ

Related posts

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
error: Content is protected !!