25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ; ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿಯವರು ಶನಿವಾರ ಬೆಳ್ತಂಗಡಿ ತಾಕೂಕಿಗೆ ಆಗಮಿಸಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಲ್ಲಿ ವಿಶೇಷ ಪೂಜೆಯಲ್ಲಿ‌‌ ಭಾಗಿಯಾದರು.

ಸಂಜೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ವೇಳೆ ಕ್ಷೇತ್ರದ ಪರವಾಗಿ ಡಿ‌ ಹರ್ಷೇಂದ್ರ ಕುಮಾರ್ ಬರಮಾಡಿಕೊಂಡರು.

ಬಳಿಕ ನಾಳ‌ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ದೇವಿಗೆ ವಿಶೇಷ ದುರ್ಗಾ ಪೂಜೆ ಸಲ್ಲಿಸಿದರು.
ನಾಡಿಗೆ ಸುಬೀಕ್ಷೆ ಹಾಗೂ ವಿಶೇಷ ಸಂಕಲ್ಪ ನಿಮಿತ್ತ ದೇವಳದಲ್ಲಿ ಮೂರು‌ ದಿನಗಳಿಂದ, ಪ್ರಧಾನ
ಅರ್ಚಕರಾದ ವೇದಮೂರ್ತಿ‌ ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ನಡೆದ ಅರ್ಚೆನೆ ಹಾಗೂ ವಿಧಿ ವಿಧಾನಗಳ ಜೊತೆಗೆ ಧಾರ್ಮಿಕ ಹೋಮ ಹವನ ನಡೆದು ಅದರ ಪೂರ್ಣಾಹುತಿಯಲ್ಲಿ ಅವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು
ಬೊಮ್ಮನಹಳ್ಳಿ ಕ್ಷೇತ್ರದ ನಾರಾಯಣ ರಾಜು,‌ ವಿಧಾನ‌ ಪರಿಷತ್ ಶಾಸಕ ಎಸ್.ಎಲ್ ಭೋಜೇ ಗೌಡ, ರಾಜ್ಯ ವಕ್ತಾರ ಹಾಗೂ ಮಾದ್ಯಮ ಸಂಚಾಲಕ ಎಂ.ಬಿ ಸದಾಶಿವ,‌
ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್, ತಾಲೂಕು ನಿಯೋಜಿತ ಅದ್ಯಕ್ಷ ಶ್ರೀನಿವಾಸ ಗೌಡ ಪಟ್ರಮೆ, ಪ್ರಮುಖರಾದ ಹೆಚ್.ಎನ್ ನಾಗರಾಜ್, ರಾಮ ಆಚಾರಿ, ಶಾಹಿದ್ ಪಾದೆ ಉಪಸ್ಥಿತರಿದ್ದರು.ದೇವಳದ ಕಡೆಯಿಂದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯರಾದ ವಸಂತ ಮಜಲು,‌ ಜನಾರ್ದನ ಪೂಜಾರಿ, ರಾಜೇಶ್ ಶೆಟ್ಟಿ,‌ ಉಮೇಶ್ ಕೇಲ್ದಡ್ಕ, ಅಂಬಾ ಬಿ ಆಳ್ವಾ, ಹಾಗೂ ಇತರರು ಭಾಗಿಯಾಗಿದ್ದರು.

ತಾಲೂಕು ಚುನಾವಣಾಧಿಕಾರಿ ಯೋಗೀಶ್, ನಗರ ಪಂಚಾಯತ್ ‌ಮುಖ್ಯಾಧಿಕಾರಿ ನಟರಾಜ್, ಪರಮೇಶ್ ಹಾಜರಿದ್ದರು.

ಸುಸ್ಥಿರ ಆಡಳಿತ: ಕುಮಾರ ಸ್ವಾಮಿ

ಮುಂದಿನ ದಿನಗಳಲ್ಲಿ ದುರ್ಗಾಪರಮೇಶ್ವರೀ ತಾಯಿಯ ಆಶೀರ್ವಾದದಿಂದ ‌ರಾಜ್ಯದಲ್ಲಿ ಸುಸ್ಥಿರ ಆಡಳಿತ ಬರುವಂತೆ ಹಾಗೂ ತಾಯಿಯ ಅನುಗ್ರಹದಿಂದ‌ ನಾಡಿನ‌ ಜನತೆಗೆ ಒಳಿತಾಗಲಿ ಎಂದು ವಿಶೇಷ ಹೋಮ ಹವನ ಮಾಡಿದ್ದೇನೆ. ಪಕ್ಷದ ಮತ್ತು ಎಲ್ಲಾ ವಿಚಾರಗಳ ಬಗ್ಹೆಯೂ ಸಂಕಲ್ಪ ಮಾಡಿದ್ದೇನೆ.

  • ಹೆಚ್.ಡಿ‌ ಕುಮಾರಸ್ವಾಮಿ

Related posts

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya
error: Content is protected !!